ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.
ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ ಮಾತನಾಡಿದ ಮೋದಿಯವರು, ಸಂಘರ್ಷ, ಯುದ್ಧ ಮತ್ತು ಭಯೋತ್ಪಾದನೆಯಿಂದ ಉದ್ಭವಿಸುವ ವಿವಿಧ ಜಾಗತಿಕ ಸವಾಲುಗಳನ್ನು ಉಲ್ಲೇಖಿಸಿದರು.
ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬೆಲೆ, ಕೋವಿಡ್-19ರ ಆರ್ಥಿಕ ಪರಿಣಾಮ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ನೈಸರ್ಗಿಕ ವಿಕೋಪಗಳ ಬಗ್ಗೆ ಮೋದಿಯವರು ಕಳವಳ ವ್ಯಕ್ತಪಡಿಸಿದರು.
“ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂಬುದು ಸ್ಪಷ್ಟವಾಗಿದೆ. “ಅಸ್ಥಿರತೆಯ ಸ್ಥಿತಿ” ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟ ಸಾಧ್ಯ ಎಂದು ಹೇಳಿದರು
ಭಾರತವು ಯಾವಾಗಲೂ ತನ್ನ ಅಭಿವೃದ್ಧಿಯ ಅನುಭವವನ್ನು “ಜಾಗತಿಕ ದಕ್ಷಿಣದ ಸಹೋದರರೊಂದಿಗೆ” ಹಂಚಿಕೊಂಡಿದೆ. ಭಾರತವು ಈ ವರ್ಷ ತನ್ನ ಜಿ 20 ಅಧ್ಯಕ್ಷತೆಯನ್ನು ಪ್ರಾರಂಭಿಸಿದ್ದು, ಜಾಗತಿಕ ದಕ್ಷಿಣದ ಧ್ವನಿಯನ್ನು ವರ್ಧಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಜಾಗತಿಕ ದಕ್ಷಿಣದ ರಾಷ್ಟ್ರಗಳನ್ನು ಒಟ್ಟುಗೂಡಿಸಲು ಭಾರತವು ಎರಡು ದಿನಗಳ ಶೃಂಗಸಭೆಯನ್ನು ಆಯೋಜಿಸುತ್ತಿದೆ ಮತ್ತು ಉಕ್ರೇನ್ ಸಂಘರ್ಷದಿಂದ ಪ್ರಚೋದಿಸಲ್ಪಟ್ಟ ಆಹಾರ ಮತ್ತು ಇಂಧನ ಭದ್ರತೆ ಸೇರಿದಂತೆ ವಿವಿಧ ಜಾಗತಿಕ ಸವಾಲುಗಳಿಗೆ ಸಂಬಂಧಿಸಿದ ಅವರ ಸಾಮಾನ್ಯ ಕಾಳಜಿಗಳನ್ನು ಹಂಚಿಕೊಳ್ಳಲು ಅವರಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ ಎಂದರು.