ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ: ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ ನಡೆಸಿ ಮಾತನಾಡಿ, ಸ್ವಾಮಿ ವಿವೇಕಾನಂದರಿಂದ ಸ್ಫೂರ್ತಿ ಪಡೆದು ತಮ್ಮ ಪ್ರಯತ್ನ ಮತ್ತು ಜವಾಬ್ದಾರಿಗಳ ಮೂಲಕ ಅಮೃತ ಕಾಲದ ಸಮಯದಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವುದು ಭಾರತೀಯ ಯುವಕರ ಮಂತ್ರವಾಗಿದೆ ಎಂದು ತಿಳಿಸಿದರು.
ಏಕ ಭಾರತ ಶ್ರೇಷ್ಠ ಭಾರತ ಒಂದು ಉದಾಹರಣೆ. ದೇಶ ಹೊಸ ಸಂಕಲ್ಪಗಳೊಂದಿಗೆ ಮುಂದಕ್ಕೆ ಸಾಗುತ್ತಿದೆ. ಯುವ ಶಕ್ತಿ ಮೂಲಕ ಭವಿಷ್ಯದ ರಾಷ್ಟ್ರದ ನಿರ್ಮಾಣ ಸುಲಭ ಎಂದರು.
2023 ರ ರಾಷ್ಟ್ರೀಯ ಯುವ ದಿನದ ಈ ದಿನ ಬಹಳ ವಿಶೇಷವಾಗಿದೆ. ಒಂದೆಡೆ ಈ ಶಕ್ತಿ ಹಬ್ಬ ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ವಿವೇಕಾನಂದರ ಈ ಘೋಷಣೆಯು ಭಾರತದ ಯುವಜನತೆಯ ಜೀವನ ಮಂತ್ರವಾಗಿದೆ ಎಂದರು.
ಯುವ ಜನತೆಗೆ ಸ್ವಾಮೀ ವಿವೇಕಾನಂದ ಜಿ ಅವರ ಪ್ರೇರಣೆ ಇದೆ. ಸ್ವಾಮಿ ವಿವೇಕಾನಂದರು ಹುಬ್ಬಳ್ಳಿ , ಧಾರಾವಾಡಕ್ಕೂ ಬಂದಿದ್ದರು. ಕರ್ನಾಟಕದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದರು. ಈ ಯಾತ್ರೆಯ ವೇಳೆ ಅವರ ಜೀವನಕ್ಕೆ ಹೊಸ ದಿಕ್ಕು ದೊರಕಿತು. ವಿವೇಕಾನಂದರಿಗೆ ಮೈಸೂರು ಮಾಹಾರಾಜರು ಚಿಕಾಗೊ ಯಾತ್ರೆಗೆ ನೆರವಾಗಿದ್ದರು ಎಂದರು.
ಕಿತ್ತೂರಿನ ರಾಣಿ ಚನ್ನಮ್ಮ ದೇಶದ ಅಗ್ರಗಣ್ಯ ಮಹಿಳಾ ಸ್ವಾತಂತ್ರ್ಯ ಸೇನಾನಿ ಯಾಗಿದ್ದರು. ಅವರ ಸೇನೆಯಲ್ಲಿ ಸಂಗೊಳ್ಳಿ ರಾಯಣ್ಣ ಕೂಡ ವೀರ ಸೇನಾನಿಯಾಗಿದ್ದರು ಎಂದರು.
ಮೂರು ಸಾವಿರ ಮಠ, ಸಿದ್ದಾರೂಢ ಮಠ ನೆನಪಿಸಿಕೊಂಡು, ಮಹಾನ್ ಸಂಗೀತಕಾರರಾದ ಪಂಡಿತ್ ಕುಮಾರ್ ಗಂಧರ್ವ, ಮಲ್ಲಿಕಾರ್ಜುನ ಮನ್ಸೂರ್ , ಭೀಮ್ ಸೇನ್ ಜೋಶಿ, ಗಂಗೂ ಬಾಯಿ ಹಾನಗಲ್ ಅವರನ್ನು ನೆನಪಿಸಿದರು. ಸಿದ್ದೇಶ್ವರ ಸ್ವಾಮೀಜಿ ಅವರಿಗೂ ನಾನು ಶ್ರದ್ದಾಂಜಲಿ ಅರ್ಪಿಸುತ್ತೇನೆ ಎಂದರು.
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಕನ್ನಡದಲ್ಲೇ ಹೇಳಲು ಪ್ರಯತ್ನಿಸಿದರು.
ದೇಶದ ವಿವಿಧ ಭಾಗಗಳಲ್ಲಿ ನಮ್ಮ ಯುವಕರ ಪ್ರತಿಭೆ ಮತ್ತು ಸಾಮರ್ಥ್ಯಕ್ಕೆ ನಂಬಲಾಗದ ಉದಾಹರಣೆಗಳಿವೆ. ಇಂದಿಗೂ ವಿಶ್ವ ವೇದಿಕೆಗಳಲ್ಲಿ ಗಣಿತದಿಂದ ವಿಜ್ಞಾನದವರೆಗೆ ಸ್ಪರ್ಧೆಗಳು ನಡೆದಾಗ ಭಾರತೀಯ ಯುವಕರ ಸಾಮರ್ಥ್ಯ ಜಗತ್ತನ್ನೇ ಬೆರಗುಗೊಳಿಸುತ್ತದೆ ಎಂದರು.