ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ತೀವ್ರ ವಾಯುಮಾಲಿನ್ಯ ಸಮಸ್ಯೆಯನ್ನು ಜಗತ್ತಿಗೆ ಎತ್ತಿತೋರಿಸುವ ನಿಟ್ಟಿನಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಶಾಸಕರು ಆಮ್ಲಜನಕ ಸಿಲಿಂಡರ್ ಮತ್ತು ಆಮ್ಲಜನಕ ಮಾಸ್ಕ್ ಧರಿಸಿ ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದರು.
ವಿಧಾನಸಭೆಯ 4ನೇ ಹಂತದ ಅಧಿವೇಶನವು ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಯಿತು.
ಸಿಲಿಂಡರ್ ಹೊರಗೆ ಇಡುವಂತೆ ಬಿಜೆಪಿ ಸದಸ್ಯರಿಗೆ ಸೂಚಿಸಿದ ಸ್ಪೀಕರ್ ರಾಮ ನಿವಾಸ್ ಗೋಯಲ್, ಇಷ್ಟು ಭದ್ರತೆ ನಡುವೆಯೂ ಆಮ್ಲಜನಕದ ಸಿಲಿಂಡರ್ ಅನ್ನು ಸದನಕ್ಕೆ ತಂದಿದ್ದು ಹೇಗೆ? ಎಂದು ಪ್ರಶ್ನಿಸಿದರು.
ಘಟನೆಯನ್ನು ಭದ್ರತಾ ಲೋಪ ಎಂದು ಪರಿಗಣಿಸಿದ ಸ್ಪೀಕರ್, ಭದ್ರತಾ ಸಿಬ್ಬಂದಿಯನ್ನು ತಮ್ಮ ಕೊಠಡಿಗೆ ಕರೆದು ಎಚ್ಚರಿಕೆ ನೀಡಿದ್ಧಾರೆ.
ಈ ಮಧ್ಯೆ, ಸರ್ಕಾರದ ಕಾರ್ಯವೈಖರಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹಸ್ತಕ್ಷೇಪ ಕುರಿತಾಗಿ ಎಎಪಿ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನವನ್ನು 10 ನಿಮಿಷ ಮುಂದೂಡಲಾಗಿತ್ತು.
ಈ ಕುರಿತಂತೆ ನಿಲುವಳಿ ಮಂಡಿಸಿದ ಎಎಪಿ ಶಾಸಕ ಸೌರಭ್ ಭಾರದ್ವಾಜ್, ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಅಕ್ರಮವಾಗಿ ಹಸ್ತಕ್ಷೇಪ ಮಾಡುತ್ತಿದ್ದು, ತೊಡಕನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.