ಮನೆ ಅಪರಾಧ ಸ್ಯಾಂಟ್ರೋ ರವಿ ಪ್ರಕರಣ: ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಾಯ- ರಮೇಶ್ ಬಾನೋತ್

ಸ್ಯಾಂಟ್ರೋ ರವಿ ಪ್ರಕರಣ: ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಾಯ- ರಮೇಶ್ ಬಾನೋತ್

0

ಮೈಸೂರು(Mysuru): ಸ್ಯಾಂಟ್ರೋ ರವಿ ಪ್ರಕರಣದಲ್ಲಿ  ತನಿಖಾಧಿಕಾರಿ ಬದಲಾಗಿದ್ದರಿಂದ ನಮ್ಮ ಪಾತ್ರ ಇರುವುದಿಲ್ಲ ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಾಯ ಬೇಕಾದರೆ ನೀಡುತ್ತೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಹೀಗಾಗಿ ಕೇಸ್’ನ ದಾಖಲೆ ಪತ್ರಗಳನ್ನು ಸಿಐಡಿ ಅಧಿಕಾರಿಗಳಿಗೆ ವರ್ಗಾಯಿಸಿದ್ದೇವೆ. ಸರ್ಕಾರದ ಆದೇಶದಂತೆ ಸಿಐಡಿ ಅಧಿಕಾರಿಗಳು ಮೈಸೂರಿಗೆ ಬಂದಿದ್ದಾರೆ ಎಂದು ತಿಳಿಸಿದರು.

ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪ್ರಕರಣ ಸಿಐಡಿಗೆ ವಹಿಸಬಹುದು ಎಂದು ತಿಳಿಸಿದರು.