ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಉತ್ತರಾಖಂಡದ ಜೋಶಿಮಠದಲ್ಲಿ ಮನೆ ಮತ್ತು ರಸ್ತೆಗಳು ಬಿರುಕು ಬಿಟ್ಟ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ವಿಲೇವಾರಿ ಮಾಡಿದೆ.
[ಜಗದ್ಗುರು ಶಂಕರಾಚಾರ್ಯ ಜ್ಯೋತಿರ್ಮಠ ಜ್ಯೋತಿಷ್ಪೀಠಾಧೀಶ್ವರ ಶ್ರೀ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಜೀ ಮಹಾರಾಜ್ ಅಂಜನೀ ಕುಮಾರ್ ಮಿಶ್ರಾ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣ].
ಉತ್ತರಾಖಂಡ ಹೈಕೋರ್ಟ್ ನಡೆಸಬೇಕಿದ್ದ ವಿಚಾರಣೆಯನ್ನು ತಾನು ಕಸಿದುಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರಿದ್ದ ಪೀಠ ಹೇಳಿತು. ಈ ಹಿನ್ನೆಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಇಲ್ಲವೇ ಅಲ್ಲಿನ ವಿಚಾರಣೆ ಪ್ರಕ್ರಿಯೆಯಲ್ಲಿ ಮಧ್ಯ ಪ್ರವೇಶಿಸಲು ಕೋರಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಅದು ಸಲಹೆ ನೀಡಿತು.
ಜನರು ಸಾಯಲಿದ್ದು ಪುನರ್ವಸತಿ ಅಗತ್ಯವಿದೆ ಎಂದು ಅರ್ಜಿದಾರರ ವಕೀಲರು ಕೋರಿದರು. ಆಗ ಸಿಜೆಐ “ದಯವಿಟ್ಟು ಸಾಮಾಜಿಕ ಮಾಧ್ಯಮಗಳಲ್ಲಿ ದೊರೆಯುವ ಪ್ರಚಾರಕ್ಕಾಗಿ ಹೇಳಿಕೆ ನೀಡದಿರಿ. ನೀವು ಮಾಡಿದ ಪ್ರಾರ್ಥನೆಗಳು ಸಂವಿಧಾನದ 226ನೇ ವಿಧಿಯ ವ್ಯಾಪ್ತಿಯೊಳಗೆ ಬರುವುದಿಲ್ಲವೇ? ಮಿಗಿಲಾಗಿ ನೀವು ಹೆಚ್ಚುವರಿಯಾಗಿ ಏನನ್ನಾದರೂ ಹೇಳಬೇಕಿದ್ದರೆ ಹೈಕೋರ್ಟ್ ಸಂಪರ್ಕಿಸಲು ನಿಮಗೆ ಸ್ವಾತಂತ್ರ್ಯ ಇದೆ. ನಾವೇನಾದರೂ ವಿಚಾರಣೆ ಆರಂಭಿಸಿದರೆ ಪ್ರಕರಣದ ವಿಚಾರಣೆ ನಡೆಸಲು ಹೈಕೋರ್ಟ್ಗೆ ಇರುವ ಅವಕಾಶವನ್ನು ಕಸಿದುಕೊಂಡಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿತು.
ಅರ್ಜಿಯಲ್ಲಿ ಮಂಡಿಸಲಾದ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಕ್ರಮ ಕೈಗೊಂಡಿದೆ ಎಂದು ಉತ್ತರಾಖಂಡ ಸರ್ಕಾರದ ಪರ ವಕೀಲರು ಹೇಳಿದರು.
ಅರ್ಜಿಯಲ್ಲಿನ ವಾದಗಳ ಮೇಲೆ ರಾಜ್ಯ ಕ್ರಮ ಕೈಗೊಂಡಿದೆ ಎಂದು ಉತ್ತರಾಖಂಡ ಸರ್ಕಾರದ ಪರ ವಕೀಲರು ಇಂದು ಗಮನ ಸೆಳೆದರು. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಬಿರುಕು ಬಿಟ್ಟಿರುವ ಮನೆಗಳಿಗೇ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ದೂರಿದರು.
ಆಗ ಸುಪ್ರೀಂ ಕೋರ್ಟ್ “ಜೋಶಿಮಠ ಪ್ರದೇಶದಲ್ಲಿ ನಿರ್ಮಾಣ ಕಾರ್ಯಕ್ಕೆ ಹೇರಿರುವ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯಕ್ಕೆ ಸೂಚಿಸಲಾಗಿದೆ. ಸಂವಿಧಾನದ 32ನೇ ವಿಧಿಯಡಿ ಕೋರಿದ ಪರಿಹಾರ ಹೈಕೋರ್ಟ್’ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಗಣನೀಯವಾಗಿ ಅತಿಕ್ರಮಿಸುತ್ತದೆ, ಅರ್ಜಿದಾರರು ಈಗ ಹೈಕೋರ್ಟ್’ನಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಬಹುದು ಅಥವಾ ಹೊಸದಾಗಿ ಮನವಿ ಸಲ್ಲಿಸಬಹುದು. ನೀವು ಸಲ್ಲಿಸುವ ಅರ್ಜಿಯನ್ನು ಸಮಂಜಸವಾಗಿ ಪರಿಗಣಿಸುವಂತೆ ನಾವು ಹೈಕೋರ್ಟ್’ಗೆ ಕೇಳಿಕೊಳ್ಳುತ್ತೇವೆ ”ಎಂದು ಸುಪ್ರೀಂ ಕೋರ್ಟ್ ತಿಳಿಸಿತು.