ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಕೋವಿಡ್ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಶುಕ್ರವಾರ ಬೆಳಿಗ್ಗೆ ಅದ್ಧೂರಿಯಾಗಿ ಜರುಗಿತು.
ಬೆಳಿಗ್ಗೆ 10.50ಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಸಚಿವ ಸುನಿಲ್ ಕುಮಾರ್ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಈ ವೇಳೆ ಕುಶಾಲತೋಪುಗಳನ್ನು ಸಿಡಿಸಲಾಯಿತು. ಭಕ್ತರ ಜಯಘೋಷ ಮುಗಿಲುಮುಟ್ಟಿತ್ತು. ಗ್ರಾಮದ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ನಾಡಿನ ವಿವಿಧ ಮೂಲೆಗಳಿಂದ ಹರಿದು ಬಂದಿದ್ದ ಭಕ್ತರು ರಥಕ್ಕೆ ಹಣ್ಣು-ಜವನ ಎಸೆದು ನಮಿಸಿದರು.
ನೂರಾರು ಮಂದಿ ಹೆಬ್ಬಾವಿನ ಗಾತ್ರದ ರಥದ ಮಿಣಿಯನ್ನು ಹಿಡಿದು ಎಳೆಯುತ್ತಿದ್ದರೆ ರಾಜಠೀವಿಯಿಂದ ರಥವು ಸಾಗಿತು. ಮಠದ ಗುರು ಪರಂಪರೆಗೆ ಭಕ್ತರು ಜಯಕಾರ ಹಾಕಿದರು. ಜಾನಪದ ಕಲಾತಂಡಗಳೊಂದಿಗೆ ರಥವು ಕ್ರಮಿಸಿತು.
ತಮಟೆ, ನಗಾರಿ ವಾದ್ಯಗಳ ನಾದ ಮುಗಿಲುಮುಟ್ಟಿತು. ಮುಂದೆ ಸಾಗುತ್ತಿದ್ದ ಚಿಕ್ಕತೇರಿಗೂ ಭಕ್ತವೃಂದ ತಲೆಬಾಗಿ ನಮಸ್ಕರಿಸಿತು. ಹೂ ಪ್ರಸಾದ ಸ್ವೀಕರಿಸಿ ಕೈಮುಗಿಯಿತು. ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು.
ರಥೋತ್ಸವದ ಮೆರವಣಿಗೆಯಲ್ಲಿ ಸಾಗಿದ 38 ಕಲಾತಂಡಗಳು ದಸರೆಯನ್ನು ನೆನಪಿಸಿದವು.
ನಂದಿಧ್ವಜ ಕುಣಿತ ರಥದ ಮುಂಭಾಗವಿತ್ತು. ನಾಗಮಂಗಲದ ಮಹದೇವಪ್ಪ, ಕಿರಾಳು ಮಹೇಶ್ ನೇತೃತ್ವದ ಲಿಂಗಧೀರರು ಹೆಜ್ಜೆ ಹಾಕುವ ಮೂಲಕ ಮೆರವಣಿಗೆಯ ಚೆಲುವು ಹೆಚ್ಚಿಸಿದರು. ನಾದಸ್ವರದಲ್ಲಿ 7 ಮಂದಿ ಕಲಾವಿದರು ಭಾಗಿಯಾದರು. ಶ್ರೀರಂಗಪಟ್ಟಣದ ಗುರುಪ್ರಸಾದ್ ನೇತೃತ್ವದ 6 ಮಂದಿ ಕಲಾವಿದರಿಂದ ಹೊರಹೊಮ್ಮುತ್ತಿದ್ದ ಸ್ಯಾಕ್ಸೋಪೋನ್ ನಾದವು ಮೋಡಿ ಮಾಡಿತು. ಸುತ್ತೂರು ಉಚಿತ ಶಾಲೆಯ ಮಕ್ಕಳು ವೀರಗಾಸೆ ಪ್ರದರ್ಶಿಸಿದರು.
ಯಡಹಳ್ಳಿಯ ಪ್ರಕಾಶ್, ಬೀಡನಹಳ್ಳಿಯ ಶಿವು ಅವರ ಪೂಜಾಕುಣಿತ, ನಂಜನಗೂಡಿನ ಮಹೇಶ್ ಅವರ ಗಾರುಡಿ ಗೊಂಬೆಗಳು ಎಲ್ಲರನ್ನು ಸೆಳೆದವು. ಶಿವಮೊಗ್ಗದ ಗಣೇಶ್, ಬೆಂಡೆಕಟ್ಟೆ ಮಹೇಶ್, ಪಾಂಡವಪುರದ ಶಿವಕುಮಾರ್ ಅವರ ಡೊಳ್ಳು ಕುಣಿತದ ಸದ್ದು ಧಿಮಿಧಿಮಿಸಿತು. ಶಿವಮೊಗ್ಗದ ಯುವರಾಜ್ ಅವರ ಜಾಂಜ್ ಮೇಳ, ತಳಗವಾಡಿಯ ಕೊರವಂಜಿ ಕೋಲಾಟ ಗಮನ ಸೆಳೆದವು. ರುದ್ರ ವೇಷದಲ್ಲಿದ್ದ ತಾಯೂರಿನ ಸಿದ್ದರಾಜು ಅವರ ಮರಗಾಲು ಸೂಜಿಗಲ್ಲಿನಂತೆ ಆಕರ್ಷಿಸಿತು.
ಮೈಸೂರಿನ ರವಿಚಂದ್ರ ಮತ್ತು ತಂಡದ ಕಂಸಾಳೆ, ಕೆ.ಆರ್.ನಗರದ ಎ.ಪಿ.ಕೃಷ್ಣೇಗೌಡ ತಂಡದ ಹುಲಿವೇಷ, ಸುತ್ತೂರು ಗ್ರಾಮದವರ ವೀರಮಕ್ಕಳಕುಣಿತ, ಧಾರವಾಡದ ಚನ್ನಯ್ಯ ಕಡ್ಲಿಮಠ್ ತಂಡದ ದೊಣ್ಣೆವರಸೆ ಮೋಡಿ ಮಾಡಿತು.