ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಎಸ್ಕಾಂಗಳು ಲಾಭದ ಕಡೆ ಹೆಜ್ಜೆ ಇಡಬೇಕು. ಎಸ್ಕಾಂಗಳನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ನಾವು ಯಾವುದೇ ಹಂತದಲ್ಲೂ ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದಿಲ್ಲ ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ರೈತರಿಗೆ ದಿನಕ್ಕೆ 7 ಗಂಟೆ ಮೂರು ಪೇಸ್ ವಿದ್ಯುತ್ ನೀಡುತ್ತಿದ್ದೇವೆ ಏಪ್ರಿಲ್, ಮೇನಲ್ಲಿ ವಿದ್ಯುತ್ ಬೇಡಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ 294 ಸಬ್ ಸ್ಟೇಷನ್ ಗಳ ಉನ್ನತೀಕರಿಸಲಾಗಿದೆ. ಇನ್ನೂ ಹಲವು ಅಭಿವೃದ್ಧಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಅಮೃತ ಯೋಜನೆ ಮೂಲಕ ಉಚಿತ 75 ಯುನಿಟ್ ವಿದ್ಯುತ್ ಕೊಡುವ ಕೆಲಸ ನಡೆಯುತ್ತಿದೆ. ಈ ಮೂಲಕ ನಮ್ಮ ಇಲಾಖೆಯನ್ನು ಜನಸ್ನೇಹಿ ಇಲಾಖೆಯಾಗಿ ಮಾಡುತಿದ್ದೇವೆ ಎಂದರು.
ಟಿಸಿ ಸುಟ್ಟುಹೋದರೆ ಕೇವಲ 24 ಗಂಟೆಯಲ್ಲಿ ಬದಲಾಯಿಸುವ ಕೆಲಸ ಮಾಡುತ್ತೇವೆ. ಹೊಸ ಹೊಸ ಯೋಜನೆಗಳು ಮತ್ತು ಆಲೋಚನೆಗಳೊಂದಿಗೆ ಇಲಾಖೆಯನ್ನು ಸದೃಢ ಮಾಡುತ್ತಿದ್ದೇವೆ. ರೈತರಿಗೆ ಲೋಡ್ ಶೆಡ್ಡಿಂಗ್ ಇಲ್ಲದೆ ದಿನದ 7 ಗಂಟೆ ಮೂರು ಪೇಸ್ ವಿದ್ಯುತ್ ಕೊಡುತ್ತಿದ್ದೇವೆ. ನಮ್ಮ ರೈತರಿಗೆ 7 ಗಂಟೆ ವಿದ್ಯುತ್ ಕೊಟ್ಟೆ ಕೊಡುತ್ತೇವೆ ಎಂದು ತಿಳಿಸಿದರು.
ಕುಸುಮ್ ಯೋಜನೆ ಅಡಿಯಲ್ಲಿ 4 ಲಕ್ಷಕ್ಕೂ ಹೆಚ್ಚು ರೈತರಿಗೆ ಐಪಿ ವಿದ್ಯುತ್ ನೀಡುತ್ತಿದ್ದೇವೆ. ಹೊಸ ಯೋಜನೆಗಳು, ಹಸಿರು ವಿದ್ಯುತ್ ಕಡೆಗೆ ಚಲಿಸುವ ಪ್ರಯತ್ನ ಮಾಡುತ್ತೇವೆ. ರೂಟ್ ಟಾಪ್, ಮೇಲ್ಚಾವಣಿಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದಿಸಲು ಎಲ್ಲರಿಗೂ ಸಬ್ಸಿಡಿ ದರದಲ್ಲಿ ಧನಸಹಾಯವನ್ನು ಮಾಡುತ್ತೇವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿದ್ಯುತ್ ಚಾರ್ಜಿಂಗ್ ಸೆಂಟರ್ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.