ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ವಿಜಯಪುರ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತ ಶಿಕ್ಷಣ ಹಾಗೂ ಚಿಕಿತ್ಸೆ ನೀಡಲು ಕ್ರಮವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಜೆಡಿಎಸ್ ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್’ಕೆಜಿಯಿಂದ ಪಿಯುಸಿ ವರೆಗೆ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಹೈಟೆಕ್ ಶಾಲೆ ಹಾಗೂ ಎಲ್ಲ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲು ಹೈಟೆಕ್ ಆಸ್ಪತ್ರೆಯನ್ನು ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.
ಪಂಚರತ್ನ ಯೋಜನೆಗೆ ಜಾತಿ, ಧರ್ಮದ ಸೋಂಕಿಲ್ಲ, ಸರ್ವ ಜನತೆ ಹಿತವೇ ಈ ಯೋಜನೆ ಧ್ಯೇಯ. ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ಒದಗಿಸಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು, ಯುವಕರ ಕೈಗೆ ಉದ್ಯೋಗ ನೀಡಲಾಗುವುದು ಎಂದರು.
ರೈತರು ಸಾಲಗಾರರಾಗಬಾರದು, ರೈತರು ದೃತಿಗೆಡಬಾರದು, ನಾನಿದ್ದೇನೆ. ರೈತಬಂಧು, ರೈತ ಚೈತನ್ಯ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದರು.
ಬಿತ್ತನೆ ಮಾಡಲು ರೈತರಿಗೆ ಎಕರೆಗೆ ₹10 ಸಾವಿರ ನೀಡಲಾಗುವುದು, ನೇರವಾಗಿ ರೈತನ ಖಾತೆಗೆ ಹಣ ಜಮೆ ಮಾಡಲಾಗುವುದು, ಹೈನುಗಾರಿಕೆ, ಕುರಿ ಸಾಕಾಣಿಕೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಜೆಡಿಎಸ್ ಸರ್ಕಾರ ರೈತರ ಸಾಲಮನ್ನಾಕ್ಕೆ ಮೀಸಲಿರಿಸಿದ್ದ ಸಾವಿರಾರು ಕೋಟಿ ಅನುದಾನವನ್ನು ಬೇರೆ ಉದ್ದೇಶಗಳಿಗೆ ಹಂಚಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುವ, ಯುವಕರ ಮನಸ್ಸು ಕೆಡಿಸುವ ಕೆಲಸ ಬಿಜೆಪಿ ಮಾಡುತ್ತಿರುವುದು ಖಂಡನಾರ್ಹ ಎಂದರು.
ಬಿಜೆಪಿಯ ಅಂತ್ಯಕಾಲ ಬಂದಿದೆ, ಪಾಪದ ಕೊಡ ತುಂಬಿದೆ, ಬಿಜೆಪಿ ಟೆಂಟ್ ಖಾಲಿ ಮಾಡಿಕೊಂಡು ವಾಪಾಸ್ಸಾಗುವ ದಿನ ಸನ್ನಿಹಿತವಾಗಿದೆ ಎಂದು ಹೇಳಿದರು.