ಮನೆ ಅಪರಾಧ ನಟಿ ರಚಿತಾ ರಾಮ್ ವಿರುದ್ಧ ಪ್ರಕರಣ ದಾಖಲು

ನಟಿ ರಚಿತಾ ರಾಮ್ ವಿರುದ್ಧ ಪ್ರಕರಣ ದಾಖಲು

0

ಭಾರತೀಯ ಸಂವಿಧಾನ ಹಾಗೂ ಗಣರಾಜ್ಯೋತ್ಸವ ದಿನಕ್ಕೆ ನಟಿ ತಮ್ಮ ಹೇಳಿಕೆಯಲ್ಲಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸ್ಯಾಂಡಲ್’ವುಡ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಟಿಯ ಹೇಳಿಕೆಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.

ನಟಿ ತಮ್ಮ ಸಿನಿಮಾ ಪ್ರಚಾರದ ವೇಳೆ ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತುಬಿಡಿ ಎಂದು ಹೇಳಿದ್ದಾರೆ. ನಟಿ ಕೊಟ್ಟಿರುವ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಎಲ್ಲರೂ ಗೌರವ ಸಲ್ಲಿಸಿದರೆ ನಟಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಚಿತಾರಾಮ್ ಅವರ ಹೇಳಿಕೆ ದೇಶ ದ್ರೋಹ ಹೇಳಿಕೆಯಾಗಿದ್ದು, ಇವರ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.