ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ(Newdelhi): ಭಾರತವು ಇಂದು ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಗೂಗಲ್ ಅದ್ಭುತವಾದ ಡೂಡಲ್ ಅನ್ನು ರಚಿಸಿ ಶುಭಾಶಯ ತಿಳಿಸಿದೆ.
ಗುಜರಾತ್ ಮೂಲದ ಕಲಾವಿದ ಪಾರ್ಥ್ ಕೊಥೇಕರ್ ಅವರು, ಭಾರತದ ಗಣರಾಜ್ಯೋತ್ಸವದ ಅಂಗವಾಗಿ ರಚಿಸಿದ ಕಾಗದದ ಕಲಾಕೃತಿಯನ್ನು ಗೂಗಲ್ ಹಂಚಿಕೊಂಡಿದೆ.
1950 ಜನವರಿ 26 ರಂದು ಭಾರತವು ಸಂವಿಧಾನದ ಅಂಗೀಕಾರದೊಂದಿಗೆ ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ವಿಶೇಷ ದಿನವನ್ನು ಸ್ಮರಿಸಿರುವ ಗೂಗಲ್ ದೇಶದ ಜನತೆಗೆ ಶುಭಕೋರಿದೆ.
ಗೂಗಲ್ ತನ್ನ ಮುಖಪುಟದಲ್ಲಿ ಹಂಚಿಕೊಂಡ ಕಲಾಕೃತಿಯನ್ನು ಕೈಗಳಿಂದ ಕತ್ತರಿಸಿದ ಕಾಗದದಿಂದ ರಚಿಸಲಾಗಿದೆ. ಇದರಲ್ಲಿ ರಾಷ್ಟ್ರಪತಿ ಭವನ, ಇಂಡಿಯಾ ಗೇಟ್, ಸಿಆರ್’ಎಫ್’ಪಿ ಕವಾಯತು ತಂಡ ಮತ್ತು ಮೋಟಾರ್ ಸೈಕಲ್ ಸವಾರರು ಸೇರಿದಂತೆ ಗಣರಾಜ್ಯೋತ್ಸವದ ಪರೇಡ್ ಬಿಂಬಿಸುವ ಹಲವು ಅಂಶಗಳನ್ನು ಕಾಣಬಹುದಾಗಿದೆ.
ದೇಶದಲ್ಲಿ ಗಣರಾಜ್ಯೋತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕರ್ತವ್ಯ ಪಥದಲ್ಲಿ ಆಕರ್ಷಕ ಮಿಲಿಟರಿ ಮತ್ತು ಸಾಂಸ್ಕೃತಿಕ ವೈಭವ ಪ್ರದರ್ಶನ ನಡೆಯಲಿದ್ದು, ಹಲವು ರಾಜ್ಯಗಳ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ.