ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ರಾಜ್ಯದ ಜನ ಪ್ರಜ್ಞಾವಂತರು, ಬುದ್ಧಿವಂತರು. ರಾಜ್ಯಕ್ಕೆ ಸದೃಡ ಆಡಳಿತ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂಬುದು ಅವರಿಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಉಚಿತ ವಿದ್ಯುತ್ ಮೂಲಕ ತಿಂಗಳಿಗೆ 1500 ರಂತೆ, ವರ್ಷಕ್ಕೆ 18 ಸಾವಿರ, ಮನೆಯೊಡತಿಗೆ ಪ್ರತಿ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ನೀಡಲಾಗುವುದು. ಆ ಮೂಲಕ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ, ಐದು ವರ್ಷಕ್ಕೆ 2 ಲಕ್ಷಕ್ಕೂ ಹೆಚ್ಚಿನ ಹಣ ಉಳಿತಾಯವಾಗುವಂತೆ ಮಾಡುತ್ತೇವೆ ಎಂದರು
ಅವರು ಚುನಾವಣೆ ಅಕ್ರಮಕ್ಕೆ ಹಣ ಕೊಟ್ಟರೆ, ನಾವು ಜನರ ಜೇಬಿನ ಹೊರೆ ಇಳಿಸಿ, ಹಣ ಉಳಿತಾಯವಾಗುವಂತೆ ಮಾಡುತ್ತೇವೆ. ಇದು ನಮ್ಮ ಬದ್ಧತೆ, ನೀತಿಯಾಗಿದೆ ಎಂದು ಸ್ಪಷ್ಟಪಡಿಸಿದರು.
ಫೆ. 3 ರಿಂದ ತಾಲೂಕು ಮಟ್ಟದ ಯಾತ್ರೆ
ಫೆ. 3 ರಿಂದ ತಾಲೂಕು ಮಟ್ಟದ ಯಾತ್ರೆ ನಡೆಯಲಿದೆ. ನಾನು ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹಾಗೂ ಸಿದ್ದರಾಮಯ್ಯನವರು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ನಂತರ ನಾನು ಉತ್ತರ ಕರ್ನಾಟಕ ಭಾಗಕ್ಕೆ ಹೋದರೆ, ಸಿದ್ದರಾಮಯ್ಯನವರು ದಕ್ಷಿಣ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರದ ಹಗಲುಗನಸು ಕಾಣುತ್ತಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿದ್ದಾರೆ. ಅಧಿಕಾರದಲ್ಲಿದ್ದಾಗ ತಾವೆಷ್ಟು ಸಂತೋಷದಿಂದ ಅದನ್ನು ಅನುಭವಿಸಿದೆವು ಎಂಬುದಕ್ಕಿಂತ, ಅಧಿಕಾರದಲ್ಲಿದ್ದಾಗ ಜನರನ್ನು ಎಷ್ಟು ಸಂತೋಷವಾಗಿ ಇಟ್ಟೆವು ಎಂಬುದು ಮುಖ್ಯ. ನಾವು ಹೆಚ್ಚಿನ ಪ್ರಚಾರ ಮಾಡದಿದ್ದರೂ, ದೊಡ್ಡ ನಾಯಕರನ್ನು ಕರೆಸದಿದ್ದರೂ, ನಮ್ಮ ಯಾತ್ರೆಗಳಿಗೆ ಜನ ಯಾವ ರೀತಿ ಉತ್ಸಾಹದಿಂದ ಬೆಂಬಲ ನೀಡುತ್ತಿದ್ದಾರೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಪಕ್ಷ, ಜಾತಿ, ಧರ್ಮ ಬೇಧ ಬಿಟ್ಟು ಎಲ್ಲರೂ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದರು.
ಪ್ರಧಾನಿಗಳು ಹದಿನೈದು ದಿನಕ್ಕೊಮ್ಮೆ ರಾಜ್ಯ ಪ್ರವಾಸ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಮಿತ್ ಶಾ ಅವರು ಆರಂಭದಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಚುನಾವಣೆ ಎದುರಿಸುತ್ತೇವೆ ಎಂದರು.
ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಂದರೆ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ರಾಜ್ಯದ ನಾಯಕತ್ವ ವಿಫಲವಾಗಿದೆ ಎಂಬುದು ಸಾಬೀತಾದಂತಾಯಿತು. ಮೋದಿ ಅವರು 15 ದಿನಕ್ಕೊಮ್ಮೆಯಾದರೂ ಬರಲಿ, ಏನಾದರೂ ಮಾಡಲಿ. ಅವರು ನಮ್ಮ ಜನ ಪ್ರವಾಹ, ಕೋವಿಡ್ ಸಮಯದಲ್ಲಿ ಕಷ್ಟ ಅನುಭವಿಸಿದಾಗ ಬಂದು ಸ್ಪಂದಿಸಲಿಲ್ಲ. ಇಂದು ಮತಕ್ಕಾಗಿ ಬರುತ್ತಿದ್ದಾರೆ. ಯಾರಿಗೆ ವಿಶ್ವಾಸ ನೀಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ.
ಬಿಜೆಪಿ ಹಳೇ ಮೈಸೂರು ಭಾಗದ ಮೇಲೆ ಹೆಚ್ಚು ಗಮನಹರಿಸುತ್ತಿರುವ ಹಾಗೂ ಆಪರೇಷನ್ ಕಮಲದ ಸಿದ್ಧತೆ ಕುರಿತು ಮಾತನಾಡಿ, ಬಿಜೆಪಿ ನಾಯಕರ ಹೇಳಿಕೆಗಳನ್ನು ನೋಡಿ. ಮಾಜಿ ಮಂತ್ರಿಗಳು ನಾವು ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಹಣ ವೆಚ್ಚ ಮಾಡಿಯಾದರೂ ನಾವು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. ಅವರು ಚುನಾವಣೆಗೂ ಮುನ್ನವೇ ಸೋಲು ಒಪ್ಪಿಕೊಂಡಿದ್ದು, ಅವರಿಗೆ ಅಭಿನಂದನೆಗಳು ಎಂದರು.
ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದರು.