ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ: ಕಾಂಗ್ರೆಸ್ ಡ್ರಾಮಾ ಬಾಜಿ ಕಂಪನಿಯಾಗಿದ್ದು, ಅವರನ್ನು ಜನ ಈಗಾಗಲೇ ಬ್ಯಾನ್ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮತದಾರರಿಗೆ ಹಣದ ಆಮಿಷ ತೋರಿಸುತ್ತಿರುವ ಬಿಜೆಪಿಯನ್ನು ಬ್ಯಾನ್ ಮಾಡಿ ಎನ್ನುವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರದ ಬೀಜ ಬಿತ್ತಿ, ತತ್ತಿಯನ್ನಿಟ್ಟು ಕಾವನ್ನು ಕೊಟ್ಟವರು ಕಾಂಗ್ರೆಸ್ ಮುಖಂಡರು. ಅವರಿಂದಲೇ ಭ್ರಷ್ಟಾಚಾರ ಆರಂಭವಾಗಿದ್ದು ಎಂದು ತಿರುಗೇಟು ನೀಡಿದರು.
ರಾಜಕೀಯಕ್ಕೆ ಬರುವ ಪೂರ್ವ ತಮ್ಮ ಆಸ್ತಿ ಎಷ್ಟಿತ್ತು, ಈಗ ಎಷ್ಟಾಗಿದೆ ಎನ್ನುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಗರಣಗಳ ಸರಮಾಲೆಯೇ ನಡೆಯುತ್ತಿತ್ತು. ಸೋನಿಯಾಗಾಂಧಿ, ಮನಮೋಹನ್ ಸಿಂಗ್ ಸಹ ಹಗರಣದಲ್ಲಿ ಭಾಗಿಯಾಗಿದ್ದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವ ಬಿಜೆಪಿಯನ್ನು ಜನರು ಮೆಚ್ಚಿದ್ದಾರೆ. ಅದನ್ನು ಸಹಿಸದ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ ಎಂದರು.
ಮೋದಿ, ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಚುನಾವಣೆಯಲ್ಲಿ ಗೆಲ್ಲುವುದು ಕಾಂಗ್ರೆಸ್ ಎನ್ನುವ ಸಿದ್ದರಾಮಯ್ಯರ ಹೇಳಿಕೆಗೆ, ಹಿಂದಿನ ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲೂ ಅವರು ಹಾಗೆ ಹೇಳಿದ್ದರು. ನಂತರ ಆಗಿದ್ದೇನು? ಚುನಾವಣೆ ಸಮೀಪಿಸುತ್ತಿರುವ ಕಾರಣ, ಏನಾದರೂ ಹೇಳಿಕೆ ನೀಡಿ ಪ್ರಚಾರದಲ್ಲಿರಬೇಕು ಎಂದು ಅವರು ಹಾಗೆಲ್ಲ ಹೇಳಿಕೆ ನೀಡುತ್ತಾರೆ ಎಂದು ಜೋಶಿ ವ್ಯಂಗ್ಯವಾಡಿದರು.