ಮನೆ ಅಪರಾಧ ಮಹಿಳೆ ನಾಪತ್ತೆ ಪ್ರಕರಣ: ಆತ್ಮಹತ್ಯೆಗೆ ಶರಣಾದ ಯುವಕ

ಮಹಿಳೆ ನಾಪತ್ತೆ ಪ್ರಕರಣ: ಆತ್ಮಹತ್ಯೆಗೆ ಶರಣಾದ ಯುವಕ

0

ಮೈಸೂರು(Mysuru): ಮಹಿಳೆಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೊವಕನೊಬ್ಬನ ವಿರುದ್ಧ ದೂರು ದಾಖಲಾದ ಹಿನ್ನೆಲೆ ಅವಮಾನದಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಅಗ್ರಹಾರದಲ್ಲಿ ನಡೆದಿದೆ.

ರಾಘವೇಂದ್ರ ಮೃತ ಯುವಕ.

ರಾಘವೇಂದ್ರ ವಿರುದ್ಧ ಕಟ್ಟೆಮಳಲವಾಡಿ ಕೊಪ್ಪಲಿನ ಮಹಿಳೆಯನ್ನು ಕರೆದೊಯ್ದಿದ್ದ ಎಂಬ ಆರೋಪವಿತ್ತು.

ಈ ಹಿನ್ನೆಲೆ ಮಹಿಳೆ ಸಂಬಂಧಿಕರು ರಾಘವೇಂದ್ರ ವಿರುದ್ಧ ಬಿಳಿಕೆರೆ ಠಾಣೆಗೆ ದೂರು ನೀಡಿದ್ದರು.

ಮಹಿಳೆ ಕುಟುಂಬಸ್ಥರ ದೂರಿನ ಆಧಾರದಲ್ಲಿ ರಾಘವೇಂದ್ರನನ್ನು ವಿಚಾರಣೆ ನಡೆಸಲಾಗಿತ್ತು. ಬಿಳಿಕೆರೆ ಪೊಲೀಸರು ರಾಘವೇಂದ್ರ ಅಜ್ಜಿಯನ್ನೂ ವಿಚಾರಣೆ ನಡೆಸಿದ್ದರು. ಇದರಿಂದ ಅವಮಾನಗೊಂಡು ಬೇಸತ್ತು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.