ಮನೆ ಸುದ್ದಿ ಜಾಲ ಸಕಳ್ಳಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಂದ ಭೂಮಿ ಪೂಜೆ

ಸಕಳ್ಳಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಂದ ಭೂಮಿ ಪೂಜೆ

0

ತಾಂಡವಪುರ: ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸಕಳ್ಳಿ ಗ್ರಾಮದಲ್ಲಿ ಸುಮಾರು 1 ಕೋಟಿ 40 ಲಕ್ಷ ರೂಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕರು ಗ್ರಾಮದ ಕೆರೆ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ಗ್ರಾಮದ ರಸ್ತೆ ಚರಂಡಿ ಒಳಚರಂಡಿ ಕಾಮಗಾರಿಗಳಿಗೆ 40 ಲಕ್ಷಕ್ಕೂ ಹೆಚ್ಚು ಅನುದಾನವನ್ನು ನೀಡುವ ಮೂಲಕ ಗ್ರಾಮದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮದ ಕಾಂಗ್ರೆಸ್ ಮುಖಂಡ ಬಸವರಾಜ್ ಅವರ ನೇತೃತ್ವದಲ್ಲಿ ಚಾಮುಂಡಿ ಬೆಟ್ಟ ತಪ್ಪಲಿನ ಕುರುಬರಹಳ್ಳಿ ಗ್ರಾಮದ ಬಳಿಯಿಂದ ಸುಮಾರು ಒಂದು ಕಿಲೋಮೀಟರ್’ವರೆಗೆ ಸುಮಾರು 250 ಬೈಕ್’ಗಳು ಬೈಕ್ ರ್ಯಾಲಿ ನಡೆಸುವ ಮೂಲಕ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು.

ಶಾಸಕರು ಗ್ರಾಮದಲ್ಲಿರುವ ಬಸವಣ್ಣನವರ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಲಲಿತಾದ್ರಿಪುರ ಬಸವರಾಜು, ಬ್ಲಾಕ್ ಉಪಾಧ್ಯಕ್ಷ ರವಿ, ಗ್ರಾಮದ ಮುಖಂಡ ಪುನೀತ್ ರಂಗಯ್ಯ, ಉತ್ತನಹಳ್ಳಿ ಶಿವಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ್, ಎಪಿಎಂಸಿ ಸದಸ್ಯ ಸಿದ್ದರಾಮನ ಹುಂಡಿ ಬಸವರಾಜು, ಸಿದ್ದರಾಮ ಪ್ರಕಾಶ್, ನಟರಾಜು, ಸುರೇಶ್, ಉಮೇಶ, ತೇಜು, ಸಣ್ಣಮಾದು, ಶಿವು, ಮಂಜು, ಮಹಾದೇವ, ಕೆ ಎಸ್ ಹುಂಡಿ ನಂಜಯ್ಯ, ಬೀರಯ್ಯ, ಭರತ್ ಗ್ರಾಮದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.