ಮನೆ ರಾಜಕೀಯ ಕೆಲವು ಭಿನ್ನಾಭಿಪ್ರಾಯವನ್ನು ಅಸಮಾಧಾನ ಎಂದು ಅರ್ಥೈಸುವುದು ಸರಿಯಲ್ಲ: ಡಾ.ಜಿ.ಪರಮೇಶ್ವರ್.

ಕೆಲವು ಭಿನ್ನಾಭಿಪ್ರಾಯವನ್ನು ಅಸಮಾಧಾನ ಎಂದು ಅರ್ಥೈಸುವುದು ಸರಿಯಲ್ಲ: ಡಾ.ಜಿ.ಪರಮೇಶ್ವರ್.

0

ಬೆಂಗಳೂರು: ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅದನ್ನು ಅಸಮಾಧಾನ ಅಂತ ಅರ್ಥೈಸುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಮಗೆ  ತಿಳಿಸದೆ ಪ್ರಣಾಳಿಕೆಗಳನ್ನು ಘೋಷಣೆ ಮಾಡುತ್ತಿರುವ ಕುರಿತು ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.

ಈ ನಡುವೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಭೇಟಿಯಾಗಿ ಚರ್ಚೆ ನಡೆಸಿದ್ದು ಈ ವೇಳೆ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿರುವ ಡಾ.ಜಿ.ಪರಮೇಶ್ವರ್, ನಾನು 8 ವರ್ಷಗಳ ಕಾಲ ಸುದೀರ್ಘವಾಗಿ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. 2 ಲೋಕಸಭಾ ಚುನಾವಣೆ ನಿರ್ವಹಿಸಿದ್ದೇನೆ. ಈ ಅನುಭವಗಳ ಆಧಾರಾದ ಮೇಲೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಕೆಲ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯಗಳನ್ನು ಸುರ್ಜೇವಾಲಾ ಅವರ ಬಳಿ ಹೇಳಿದ್ದೇನೆ ಎಂದರು.