ಮನೆ ಸುದ್ದಿ ಜಾಲ ತಳಮಟ್ಟದಲ್ಲಿ ಮಾಹಿತಿ ಪಡೆದು ರೈತರ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿ: ಕೆ.ವಿ ರಾಜೇಂದ್ರ

ತಳಮಟ್ಟದಲ್ಲಿ ಮಾಹಿತಿ ಪಡೆದು ರೈತರ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿ: ಕೆ.ವಿ ರಾಜೇಂದ್ರ

0

ಮೈಸೂರು: ರೈತ ಆತ್ಮಹತ್ಯೆ ಪುಕರಣ ದಾಖಲಾದ ಸಂದರ್ಭದಲ್ಲಿ ಪೋಲೀಸ್ ಇಲಾಖೆವತಿಯಿಂದ ಎಫ್.ಐ.ಆರ್ ದಾಖಲು ಮಾಡುವಾಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪರಾಮರ್ಶಿಸಿ ಎಫ್.ಐ.ಆರ್ ದಾಖಲಿಸಬೇಕು. ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಹಾಯಕ ನಿಬಂಧಕರು, ಸಹಕಾರ ಇಲಾಖೆ ರವರು ಜಂಟಿಯಾಗಿ ಸತ್ಯಾಂಶವನ್ನು ತಳಮಟ್ಟದಲ್ಲಿ ಮಾಹಿತಿ ಪಡೆದು ರೈತ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರ ಆತ್ಮಹತ್ಯೆ, ಹಾವು ಕಡಿತ ಹಾಗೂ ಇತರೆ ಆಕಸ್ಮಿಕ ಮರಣಗಳ ಜಿಲ್ಲಾ ಮಟ್ಟದ ಮೇಲ್ಮನವಿ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮೈಸೂರು ಜಿಲ್ಲೆಗೆ ಒಟ್ಟು 29 ರೈತ ಉತ್ಪಾದಕ ಸಂಸ್ಥೆಗಳ ಗುರಿಯನ್ನು ಸಾಧಿಸಲಾಗಿರುತ್ತದೆ. ಪುಸ್ತುತ 2022-23 ನೇ ಸಾಲಿಗೆ 12 ಹೊಸ ರೈತ ಉತ್ಪಾದಕ ಸಂಸ್ಥೆಗಳನ್ನು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅನುಮೋದಿಸಿದರು. ಪ್ರಸ್ತುತ MOU ಆಗಿ ಹೆಚ್ಚು ಸದಸ್ಯರನ್ನು ನೊಂದಾಯಿಸದೇ ಇರುವ ಸರ್ಕಾರೇತರ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಗ್ರ ಜಿಲ್ಲಾ ನೀರಾವರಿ ಸಮಿತಿ ಯೋಜನೆಯ ಪ್ರಕಾರ ತುಂತುರು ಹಾಗೂ ಹನಿ ನೀರಾವರಿ ಘಟಕಗಳಿಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಅನುಮೋದಿಸಿದರು.

ಕರ್ನಾಟಕ ರೈತ ಸುರಕ್ಷಾ ಪಧಾನ ಮಂತ್ರಿ ಫಸಲ್ ಭಿಮಾ ವಿಮಾ ಯೋಜನೆಯಡಿ 2020-21 ನೇ ಸಾಲಿನಲ್ಲಿ 152 ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗದೇ ಬಾಕಿ ಉಳಿದಿದ್ದು ಸದರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 4 ಪ್ರಕರಣಗಳಿಗೆ ಹಣ ಪಾವತಿಸಲಾಗುತ್ತಿದೆ ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.