ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದ ಹೆಸರುಗಳನ್ನು ನೇಮಕ ಮಾಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆಗೆ ಶುಕ್ರವಾರ ತೀವ್ರ ಅಸಮಾಧಾನ ಹೊರಹಾಕಿರುವ ಸರ್ವೋಚ್ಚ ನ್ಯಾಯಾಲಯವು ಅಹಿತರಕರವಾದ ನ್ಯಾಯಾಂಗ ಮತ್ತು ಆಡಳಿತಾತ್ಮಕ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.
[ಬೆಂಗಳೂರು ವಕೀಲರ ಸಂಘ ವರ್ಸಸ್ ಬರೂನ್ ಮಿತ್ರಾ ಮತ್ತು ಇತರರು].
ಕೊಲಿಜಿಯಂ ಡಿಸೆಂಬರ್ನಲ್ಲಿ ಶಿಫಾರಸ್ಸು ಮಾಡಿರುವ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್’ಗೆ ನೇಮಕ ಮಾಡಿ ಅಧಿಸೂಚನೆ ಹೊರಡಿಸುವುದು ಯಾವಾಗ ಎಂದು ಅಟಾರ್ನಿ ಜನರಲ್ ಎನ್ ವೆಂಕಟರಮಣಿ ಅವರನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಶ್ರೀನಿವಾಸ್ ಓಕಾ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಶ್ನಿಸಿತು.
ಇದಕ್ಕೆ ಎಜಿ ಅವರು ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದರು. ಆಗ ಪೀಠವು “ಸುಪ್ರೀಂ ಕೋರ್ಟ್’ಗೆ ಇದುವರೆಗೆ ಐವರು ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಐದು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು” ಎಂದು ಆದೇಶದಲ್ಲಿ ದಾಖಲಿಸಲು ಮುಂದಾಯಿತು.
ಆಗ ಎಜಿ ಅವರು “ಇದನ್ನು ನೀವು ದಾಖಲಿಸಬೇಕಿಲ್ಲ. ಇದು (ನೇಮಕಾತಿ) ಆಗುವುದರಲ್ಲಿದೆ ಎಂದು ನೀವು ದಾಖಲಿಸಬಹುದು” ಎಂದರು. ಇದಕ್ಕೆ ನ್ಯಾ. ಕೌಲ್ ಅವರು “ಇದು ಆಗುವುದರಲ್ಲೇ ಇದೆ! ಯಾವಾಗ ಆಗುತ್ತದೆ ಹೇಳಿ? ಅನೇಕ ವರ್ಷಗಳಿಂದ ಏನೂ ಆಗುತ್ತಿಲ್ಲ” ಎಂದರು.
ಮುಂದುವರಿದು ಪೀಠವು ಮುಂದಿನ ಶುಕ್ರವಾರದ ವೇಳೆಗೆ ಎಜಿ ಅವರು ಶುಭ ಸುದ್ದಿ ನೀಡುತ್ತಾರೆ ಎಂಬ ಭರವಸೆ ಹೊಂದೋಣ ಎಂದಿತು. ಆಗ ವೆಂಕಟರಮಣಿ ಅವರು ಹೆಚ್ಚಿನ ಕಾಲಾವಕಾಶ ಕೋರಿದರು.
ಆಗ ಪೀಠವು “ಸರಿ, ಹತ್ತು ದಿನಗಳನ್ನು ನೀಡಲಾಗುವುದು. ಸುಪ್ರೀಂ ಕೋರ್ಟ್’ಗೆ ಐವರು ನ್ಯಾಯಮೂರ್ತಿಗಳ ನೇಮಕ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ ವಿಚಾರಕ್ಕೆ ನಿಮ್ಮ ಮಾತು ಪರಿಗಣಿಸಲಾಗುವುದು. ಈ ವಿಚಾರದಲ್ಲಿ ನಿಮಗೆ ಹತ್ತು ದಿನ ನೀಡುತ್ತೇವೆ” ಎಂದು ನ್ಯಾ. ಕೌಲ್ ಹೇಳಿದರು.
“ವರ್ಗಾವಣೆ ಆದೇಶವನ್ನು ಜಾರಿಗೊಳಿಸದಿದ್ದರೆ, ನಾವು ಏನು ಮಾಡಬೇಕು? ಅವರಿಂದ ನಾವು ಕೆಲಸ ಹಿಂಪಡೆಯಬೇಕೆ? ಇದು ನಮಗೆ ಗಂಭೀರ ವಿಚಾರವಾಗಿದೆ. ಕೆಲ ಗಂಭೀರ ತೀರ್ಮಾನ ಮಾಡಲು ನೀವು ಪ್ರೇರೇಪಿಸುತ್ತಿದ್ದೀರಿ. ಹೊಸ ನೇಮಕಾತಿಗಳ ಬಗ್ಗೆ ನಿಮಗೆ ಕೆಲವು ವಿಚಾರ ಹೇಳುವುದಕ್ಕಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬಹುದು. ಆದರೆ, ವರ್ಗಾವಣೆಗಳ ವಿಚಾರದಲ್ಲಿ ಏನು ಹೇಳಲು ಇದೆ? ಇದು ಗಂಭೀರ ವಿಚಾರ” ಎಂದರು.
ಪ್ರಕರಣ ವಿಚಾರಣೆ ಮುಂದೂಡುವಂತೆ ಎಜಿ ಕೋರಿದಾಗ ಪೀಠವು “ವರ್ಗಾವಣೆ ವಿಚಾರದಲ್ಲಿ ವಿಳಂಬ ಮಾಡುವುದು ನ್ಯಾಯಾಲಯವು ಆಡಳಿತಾತ್ಮಕ ಮತ್ತು ನ್ಯಾಯಿಕ ಕ್ರಮಕ್ಕೆ ಮುಂದಾಗಲು ದಾರಿ ಮಾಡಿಕೊಡಲಿದ್ದು, ಅದು ಹಿತಕರವಾಗಿರುವುದಿಲ್ಲ” ಎಂದು ಎಚ್ಚರಿಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು “ಕೊಲಿಜಿಯಂ (ನ್ಯಾಯಮೂರ್ತಿಗಳ ಶಿಫಾರಸ್ಸನ್ನು) ಪುನರುಚ್ಚರಿಸಿದ ಮೇಲೆ ಸರ್ಕಾರಕ್ಕೆ ಮತ್ತೇನೂ ಅವಕಾಶ ಇರುವುದಿಲ್ಲ! ಸರ್ಕಾರವು ಪದೇ ಪದೇ ಅದನ್ನು (ಕೊಲಿಜಿಯಂಗೆ) ಮರಳಿಸಲಾಗದು” ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ವಾರದ ಬಳಿಕ ನಡೆಸುವುದಾಗಿ ಹೇಳಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.