ಮುಂಬೈ(Mumbai): ಸಾಕು ನಾಯಿಯೊಂದು ವ್ಯಕ್ತಿಯೊಬ್ಬರಿಗೆ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷದ ಬಳಿಕ ನಾಯಿಯ ಮಾಲೀಕರಿಗೆ 3 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಗಿರ್’ಗಾವ್ ಕೋರ್ಟ್’ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎನ್.ಎ.ಪಟೇಲ್ ಆದೇಶ ಹೊರಡಿಸಿದ್ದಾರೆ.
ಜ.3ರಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎನ್.ಎ.ಪಟೇಲ್, ನಾಯಿಯ ಮಾಲೀಕ ಸೈರಸ್ ಪೆರ್ಸಿ ಹೊರ್ಮುಸ್’ಜಿ (44) ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಈ ತೀರ್ಪು ನೀಡಿದ್ದಾರೆ.
ಇಂಥ ಆಕ್ರಮಣಕಾರಿ ನಾಯಿಗಳನ್ನು ಹೊರಗೆ ಸುತ್ತಾಡಿಸುವ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ವಹಿಸದಿದ್ದಲ್ಲಿ ಅದು ಸಾರ್ವಜನಿಕರಿಗೆ ಹಾನಿಯುಂಟುಮಾಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಏನಿದು ಪ್ರಕರಣ?:
2010ರಲ್ಲಿ ಘಟನೆ ನಡೆದಿದ್ದು, ಕೇರ್ಸಿ ಇರಾನಿ ಮತ್ತು ಹೊರ್ಮುಸ್ಜಿ ಅವರು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ–ವಿವಾದದಲ್ಲಿ ತೊಡಗಿದ್ದರು. ಪಕ್ಕದಲ್ಲೇ ಕಾರಿನ ಒಳಗೆ ಹೊರ್ಮುಸ್ಜಿ ಅವರ ರಾಟ್’ವೈಲರ್ ಸಾಕು ನಾಯಿ ಇತ್ತು. ಅದು ಹೊರಬಿಡುವಂತೆ ಕೂಗಾಡುತ್ತಿತ್ತು. ಕಾರಿನ ಬಾಗಿಲು ತೆರೆಯದಂತೆ ಮನವಿ ಮಾಡಿದ ಹೊರತಾಗಿಯೂ ಹೊರ್ಮುಸ್ಜಿ ಅವರು ನಾಯಿಯನ್ನು ಹೊರಬಿಟ್ಟಿದ್ದರು. ಅದು ಏಕಾಏಕಿ ಇರಾನಿ ಅವರ ಮೇಲೆ ದಾಳಿ ಮಾಡಿತ್ತು. ಅವರ ಬಲಗಾಲು ಮತ್ತು ಬಲಗೈಗೆ ಕಚ್ಚಿತ್ತು ಎಂದು ದೂರು ದಾಖಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.