ಕೆಂಗೇರಿ: ಯಶವಂತಪುರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ವಿಫಲವಾದರೆ ರಾಜಕೀಯ ನಿವೃತ್ತಿ ಪಡೆಯುವುವುದಾಗಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಜವರಾಯಿಗೌಡ ಅವರನ್ನು ಕ್ಷೇತ್ರದ ಆಭ್ಯರ್ಥಿಯಾಗಿ ಘೋಷಿಸಿದ ಬಳಿಕ ಅವರು ಮಾತನಾಡಿದರು.
ಕಳೆದ ಮೂರು ಚುನಾವಣೆಗಳಲ್ಲಿ ಜವರಾಯಿಗೌಡ ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಕ್ಷೇತ್ರದ ಮತದಾರರ ಅನುಕಂಪ ಅವರ ಮೇಲಿದೆ. ಈ ಬಾರಿ ಜನರು ಅವರನ್ನು ಕೈ ಹಿಡಿಯಲಿದ್ದಾರೆ. ವೈಯಕ್ತಿಕವಾಗಿ ಬೆಂಬಲ ನೀಡುವ ಅವರನ್ನು ಜಯಶೀಲರನ್ನಾಗಿ ಮಾಡಿಯೇ ತೀರುವೆ ಎಂದು ಹೇಳಿದರು.
ತ್ಯಾಜ್ಯ ವಿಲೇವಾರಿ ದೊಡ್ಡ ಮಾಫಿಯವಾಗಿದೆ. ತ್ಯಾಜ್ಯ ಸಂಸ್ಕರಣೆಗೆ ಹಲವಾರು ನೂತನ ವಿಧಾನಗಳಿವೆ. ಸರ್ಕಾರ ಈ ಬಗ್ಗೆ ಬದ್ಧತೆ ತೋರುತ್ತಿಲ್ಲ. 8 ಸಾವಿರ ಕೋಟಿ ಖರ್ಚಾದರೂ ಬೆಂಗಳೂರಿನಲ್ಲಿ ಗುಂಡಿಗಳ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಅವರು ದೂರಿದರು.
ಕಾಂಗ್ರೆಸ್- ಬಿಜೆಪಿ ಒಳ ಮೈತ್ರಿಯಿಂದ ಕಳೆದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಅವರು ತಿಳಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ನಾನಲ್ಲ. ಜನಸೇವೆ ಮಾಡಲು ಅಧಿಕಾರವೊಂದೇ ಮಾರ್ಗವಲ್ಲ ಎಂದು ಜೆಡಿಎಸ್ ಮುಖಂಡ ಜವರಾಯಿಗೌಡ ಅವರು ಹೇಳಿದರು.
ಶಾಸಕರಾದ ಅನ್ನದಾನಿ, ಎ.ಮಂಜುನಾಥ್ ಹಾಗೂ ಪಂಚಲಿಂಗಯ್ಯ, ಹನುಮಂತೇಗೌಡ, ಕುಂಬಳಗೂಡು ನರಸಿಂಹಮೂರ್ತಿ, ಕೇಶವ ಮೂರ್ತಿ, ಕಿಟ್ಟಿ ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.