ಮನೆ ರಾಜಕೀಯ ಬ್ರಾಹ್ಮಣ ಸಮುದಾಯದ ಅವಹೇಳನ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚಿಸಬೇಕು: ಡಾ.ಸಿ.ಎನ್. ಅಶ್ವತ್ಥನಾರಾಯಣ

ಬ್ರಾಹ್ಮಣ ಸಮುದಾಯದ ಅವಹೇಳನ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಕ್ಷಮೆಯಾಚಿಸಬೇಕು: ಡಾ.ಸಿ.ಎನ್. ಅಶ್ವತ್ಥನಾರಾಯಣ

0

ಬೆಂಗಳೂರು: ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಹೇಳಿಕೆಯಿಂದ ಲಿಂಗಾಯತ- ವೀರಶೈವ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಲಿದ್ದಾರೆ ಎಂದರು.

ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ಮಾತ್ರವಲ್ಲ ನಮ್ಮ ಪಕ್ಷದ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್‌’ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಹೇಳಿದರು.