ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ಕೊಡಮಾಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ.
2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ.
2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ ಹಿರೇಗುತ್ತಿ ಅವರ ‘ಫಿನಿಕ್ಸ್… ಸೋಲಿಸಬಹುದು ಸೋಲನ್ನೆ’ ಅಂಕಣ ಬರಹಗಳ ಸಂಗ್ರಹ, ಚನ್ನಮ್ಮನ ಕಿತ್ತೂರಿನ ಭುವನಾ ಹಿರೇಮಠ ಅವರ ‘ಟ್ರಯಲ್ ರೂಮಿನ ಅಪ್ಸರೆಯರು’ ಕವನ ಸಂಕಲನ.
2019ನೇ ಸಾಲಿನಲ್ಲಿ ಬೆಂಗಳೂರಿನ ಭಾರತಿ ಹೆಗಡೆ ಅವರ ‘ಮಣ್ಣಿನ ಗೆಳತಿ ಕೃಷಿ ಮಹಿಳೆಯರ ಅನುಭವ ಕಥನ’, ಭದ್ರತಾವತಿಯ ದೀಪ್ತಿ ಭದ್ರಾವತಿ ಅವರ ‘ಗೀರು ಕಥಾ ಸಂಕಲನ’ ಹಾಗೂ ಧಾರವಾಡದ ಶಾಂತಲಾ ಯೋಗೀಶ ಯಡ್ರಾವಿ ಅವರ ‘ವಿಶ್ವಜಿತ’ ಕಾದರಂಬರಿ.
2020ನೇ ಸಾಲಿನ ಹುಬ್ಬಳ್ಳಿಯ ರೂಪಾ ರವೀಂದ್ರ ಜೋಶಿ ಅವರ ‘ಶ್ರಂಖಲಾ’ ಕಾದರಂಬರಿ, ಮಂಗಳೂರಿನ ಜಯಶ್ರೀ ಬಿ. ಕದ್ರಿ ಅವರ ‘ಬೆಳಕು ಬಳ್ಳಿ ಜೀವನ ಪ್ರೀತಿ’ ಬರಹಗಳು, ಕಾರವಾರದ ಶ್ರೀದೇವಿ ಕೆರೆಮನಿ ಅವರ ‘ಅಂಗೈಯೊಳಗಿನ ಬೆಳಕು’ ಅಂಕಣ ಬರಹಗಳು.
2021ನೇ ಸಾಲಿನಲ್ಲಿ ಹುಬ್ಬಳ್ಳಿಯ ಕಾವ್ಯಾ ಕಡಮೆ ಅವರ ‘ಮಾಕೋನ ಏಕಾಂತ’ ಕಥೆಗಳು, ಬೆಂಗಳೂರಿನ ಪೂರ್ಣಿಮಾ ಮಾಳಗಿಮನಿ ಅವರ ‘ಇಜಯಾ’ ಕಾದರಂಬರಿ, ಮೈಸೂರಿನ ಡಾ. ಸುಜಾತಾ ಅಕ್ಕಿ ಅವರ ’ಆಕಾಶದ ಕೀಲಿ’ ನಾಟಕಕ್ಕೆ ಬಹುಮಾನ ಲಭಿಸಿದೆ.
ಮಾರ್ಚ್ 4 ಹಾಗೂ 5ರಂದು ಸಂಘವು ಆಯೋಜಿಸುತ್ತಿರುವ ಮಹಿಳಾ ಲೇಖಕಿಯರ ಸಮಾವೇಶದಲ್ಲಿ ಬಹುಮಾನ ನೀಡಲಾಗುವುದು. ಪ್ರತಿ ಕೃತಿಗೆ ₹10ಸಾವಿರ ನಗದು ಬಹುಮಾನ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುತ್ತದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.