ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ಕೇಂದ್ರ ತನಿಖಾ ದಳ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಾಗಿರುವ ಬುಚ್ಚಿ ಬಾಬು ಗೋರಂಟ್ಲಾ ಈ ಮೊದಲು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಎಂಎಲ್ ಸಿ ಆಗಿರುವ ಕವಿತಾ ಅವರ ಮಾಜಿ ಆಡಿಟರ್ ಆಗಿದ್ದರು.
ಅಬಕಾರಿ ಹಗರಣದಲ್ಲಿ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಬುಚ್ಚಿಬಾಬುಗೆ ಸೂಚಿಸಲಾಗಿತ್ತು. ಆದರೆ ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಚ್ಚಿಬಾಬು ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಿಬಿಐ ಮೂಲಗಳು ಹೇಳಿವೆ.
2021-22ರ ದೆಹಲಿ ಅಬಕಾರಿ ಹಗರಣದಲ್ಲಿ ಹೈದರಾಬಾದ್ ಮೂಲದ ಹೋಲ್ಸೆಲ್ ಹಾಗೂ ರಿಟೇಲ್ ಮತ್ತು ಅದರ ಮಾಲಿಕರಿಗೆ ಬುಚ್ಚಿಬಾಬು ಕಾನೂನುಬಾಹಿರವಾಗಿ ಪರವಾನಗಿ ಒದಗಿಸಿದ್ದರು ಎಂದು ಸಿಬಿಐ ಆರೋಪಿಸಿದೆ.
ದೆಹಲಿ ಅಬಕಾರಿ ಗುತ್ತಿಗೆ ಹಗರಣದಲ್ಲಿ ಕವಿತಾ ಅವರನ್ನು ಕಳೆದ ವರ್ಷ ಡಿಸೆಂಬರ್’ನಲ್ಲಿ ಸಿಬಿಐ ವಿಚಾರಣೆಗೊಳಪಡಿಸಿತ್ತು.














