ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 190 ಮಂದಿ ಹಿಂದೂಗಳಿಗೆ ಭಾರತಕ್ಕೆ ತೆರಳದಂತೆ ಅಧಿಕಾರಿಗಳು ತಡೆ ಹಾಕಿದ್ದಾರೆ.
ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಸಿಂಧ್ ಪ್ರಾಂತ್ಯದ ಹಲವು ಹಿಂದೂ ಕುಟುಂಬಗಳು ಧಾರ್ಮಿಕ ವೀಸಾದಡಿ ಭಾರತಕ್ಕೆ ತೆರಳಲು ಮಂಗಳವಾರ ವಾಘಾ ಗಡಿ ತಲುಪಿದ್ದವು ಎಂದು ಎಕ್ಸ್’ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಅವರು ಭಾರತಕ್ಕೆ ತೆರಳುತ್ತಿರುವ ಕುರಿತಂತೆ ಸೂಕ್ತ ಕಾರಣ ನೀಡದ ಹಿನ್ನೆಲೆಯಲ್ಲಿ ಗಡಿಯಲ್ಲೇ ತಡೆಯಲಾಗಿದೆ. ಧಾರ್ಮಿಕ ವೀಸಾದಡಿ ಭಾರತಕ್ಕೆ ತೆರಳುವ ಪಾಕಿಸ್ತಾನದ ಹಿಂದೂಗಳು ಬಹಳ ಸಮಯ ಅಲ್ಲಿಯೇ ಉಳಿದುಬಿಡುತ್ತಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ಸದ್ಯ, ಬಹಳ ಪ್ರಮಾಣದ ಪಾಕಿಸ್ತಾನದ ಹಿಂದೂಗಳು ದೆಹಲಿ ಮತ್ತು ರಾಜಸ್ತಾನದಲ್ಲಿ ಅಲೆಮಾರಿಗಳಾಗಿ ಜೀವಿಸುತ್ತಿದ್ದಾರೆ ಎಂದು ಅದು ಹೇಳಿದೆ.
ಪಾಕಿಸ್ತಾನದ ಒಟ್ಟು ಜನಸಂಖ್ಯೆ ಪೈಕಿ ಶೇಕಡ 1.18ರಷ್ಟು( 22,10,566) ಮಂದಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರಿದ್ದಾರೆ. ಹಿಂದೂಗಳು ಸೇರಿ ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯಗಳ ಜನರು ಬಡವರಾಗಿದ್ದು, ದೇಶದ ಶಾಸಕಾಂಗ ವ್ಯವಸ್ಥೆಯಲ್ಲಿ ಅವರ ಪ್ರಾತಿನಿಧ್ಯ ತೀರಾ ಕಡಿಮೆ ಇದೆ. ಪಾಕಿಸ್ತಾನದ ಹಿಂದೂಗಳ ಪೈಕಿ ಬಹುತೇಕ ಮಂದಿ ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದು, ಪ್ರತ್ಯೇಕತಾವಾದಿಗಳಿಂದ ಕಿರುಕುಳದ ಬಗ್ಗೆ ಆಗಾಗ್ಗೆ ದೂರು ಕೇಳಿಬರುತ್ತಿರುತ್ತವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.