ಬೆಳಗಾವಿ: ಭವಾನಿ ರೇವಣ್ಣ ಅವರು ಈ ಚುನಾವಣೆಯಲ್ಲಿ ಅನಿವಾರ್ಯ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹಾಸನ ಮತ್ತು ಹೊಳೆನರಸಿಪುರ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಹಾಸನ ಟಿಕೆಟ್ ವಿಚಾರ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ. ಚುನಾವಣೆ ಗೆಲ್ಲಬೇಕಾದ ಹಿನ್ನಲೆಯಲ್ಲಿ ನಾವು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ನಮಗೆ 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಈ ಕೊರತೆ ತುಂಬಿಕೊಳ್ಳಲು ಜನರ ವಿಶ್ವಾಸ ಪಡೆದುಕೊಳ್ಳುವ ಹೊಸ ಮುಖಗಳಿದ್ದರೂ ಸರಿ ಅವರಿಗೆ ನಾವು ಬೆಂಬಲ ಕೊಡುತ್ತೇವೆ ಎಂದರು.
ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ, ಇಂತಹ ಸಿ ಡಿ ತಯಾರಿಕೆ ಅದರ ಕಾರ್ಖಾನೆಯ ಬಗ್ಗೆ ಮಾತನಾಡುವಷ್ಟು ಸಮಯ ನನಗೆ ಇಲ್ಲ. ಮೇಲಾಗಿ ಸಿಡಿ ಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಇದನ್ನು ಇಟ್ಟುಕೊಂಡು ಚುನಾವಣೆ ಎದುರಿಸಲು ಸಾಧ್ಯವೇ?. ಜನರ ಮುಂದೆ ಇದನ್ನು ಪ್ರಸ್ತಾಪ ಮಾಡಿ ಮತಗಳಿಸಲು ಆಗುತ್ತದೆಯೇ?. ಹೀಗಿರುವಾಗ ಅದನ್ನು ಬಿಟ್ಟು ಜನರ ಸಮಸ್ಯೆಗಳ ಕಡೆ ಗಮನಹರಿಸಿದರೆ ಒಳ್ಳೆಯದು ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.