ಬೆಂಗಳೂರು: ಜನರಿಗಾಗಿ, ಜನರಿಗೋಸ್ಕರ, ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿಯ ಪ್ರಣಾಳಿಕೆ ತಯಾರಾಗಲಿದೆ. ವಿರೋಧ ಪಕ್ಷಗಳಂತೆ ಜನರ ದಿಕ್ಕು ತಪ್ಪಿಸುವ ಪ್ರಣಾಳಿಕೆ ಮಾಡುವುದಿಲ್ಲ, ಜನರ ಬದುಕು ಕಟ್ಟಿಕೊಡುವ ಯೋಜನೆಗಳಿರುವ ಪ್ರಣಾಳಿಕೆ ತಯಾರಾಗಲಿದೆ ಎಂದು ಬಿಜೆಪಿ ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನದ ಸಂಚಾಲಕರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ರಾಜ್ಯ ಬಿಜೆಪಿ ಪ್ರಣಾಳಿಕೆ ತಂಡವನ್ನು ಭೇಟಿಯಾಗಿ, ಜಿಲ್ಲಾವಾರು, ತಾಲೂಕುವಾರು ಯಾರೆಲ್ಲ ತಂಡದಲ್ಲಿರಬೇಕೆಂದು ಚರ್ಚಿಸಲಾಗಿದೆ. ಜನರ ಆಶೋತ್ತರಗಳಿಗೆ ಸೂಕ್ತವಾಗಿ ಸ್ಪಂದಿಸಿ, ಜನರ ನಾಡಿ ಮಿಡಿತ ಅರಿಯಬೇಕು, ಜನರಿಂದ, ಜನರಿಗೋಸ್ಕರ ಪ್ರಣಾಳಿಕೆ ಇರಬೇಕೆಂದು ಉದ್ದೇಶಿಸಲಾಗಿದೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಜಿಲ್ಲೆಗಳ 200 ಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಸಲಹೆ ನೀಡಲಿದ್ದಾರೆ. ಇಂದಿನ ಚರ್ಚೆಯಲ್ಲಿ ಉತ್ತಮ ಸಲಹೆ ದೊರೆತಿದ್ದು, ಪ್ರಣಾಳಿಕೆಯ ಶೀರ್ಷಿಕೆಯನ್ನು ಕೂಡ ಇಂದು ಅಥವಾ ನಾಳೆಯೇ ಅಂತಿಮ ಮಾಡಲಿದ್ದೇವೆ ಎಂದು ತಿಳಿಸಿದರು.
ಮಹಿಳೆಯರು, ಯುವಜನರು, ವೃದ್ಧರು, ಅಂಗವಿಕಲರು ಮೊದಲಾದ ಜನವರ್ಗಗಳಿಗೆ ನೀಡಲಿರುವ ಕಾರ್ಯಕ್ರಮಗಳ ಕುರಿತು ನಿರ್ಧಾರವಾಗಲಿದೆ. ಕೋವಿಡ್ ಸಾಂಕ್ರಾಮಿಕ ಹಾಗೂ ಎರಡು ಬಾರಿ ಅತಿವೃಷ್ಟಿಯನ್ನು ಬಿಜೆಪಿ ಸರ್ಕಾರ ಸಮರ್ಥವಾಗಿ ಎದುರಿಸಿದೆ. ಕೋವಿಡ್ ನಂತರದ ಐದು ವರ್ಷಗಳ ಕಾಲ ಬಿಜೆಪಿ ಅಧಿಕಾರದಲ್ಲಿರುವಾಗ ಯಾವೆಲ್ಲ ಭರವಸೆ ಈಡೇರಿಸಬಹುದು ಎಂಬುದು ಪ್ರಣಾಳಿಕೆಯಲ್ಲಿ ಬರಲಿದೆ. ಬಿಜೆಪಿ ಕೊಡುವ ಭರವಸೆ ನೈಜತೆಯಿಂದ ಕೂಡಿರಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿಯ ಭರವಸೆಯನ್ನು ನೀಡದೆಯೇ, ಆ ಯೋಜನೆ ಜಾರಿ ಮಾಡಿದ್ದಾರೆ. ಭರವಸೆಗಳನ್ನು ಮೀರಿಯೂ ಬಿಜೆಪಿ ಯೋಜನೆಗಳನ್ನು ನೀಡಲಿದೆ. ವಿರೋಧ ಪಕ್ಷಗಳಂತೆ ನಮ್ಮದು ಜನರ ದಿಕ್ಕು ತಪ್ಪಿಸುವ ಪ್ರಣಾಳಿಕೆ ಆಗಿರುವುದಿಲ್ಲ. ಆದರೆ ಜನರ ಬದುಕನ್ನು ಕಟ್ಟಿಕೊಡುವ ಪ್ರಣಾಳಿಕೆ ಆಗಲಿದೆ ಎಂದರು.
ಎಷ್ಟು ಗಂಟೆ ವಿದ್ಯುತ್ ಕೊಟ್ಟಿದ್ದಾರೆ?
ಕಾಂಗ್ರೆಸ್ ನಾಯಕರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳುತ್ತಾರೆ. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಗಂಟೆ ನಿರಂತರವಾಗಿ ವಿದ್ಯುತ್ ನೀಡಿದ್ದಾರೆ ಎಂಬುದನ್ನು ರೈತರಿಗೆ ಕೇಳಿದರೆ ಗೊತ್ತಾಗುತ್ತದೆ. ಕಾಂಗ್ರೆಸ್ ನಾಯಕರು ಏನು ಮಾಡಲು ಹೊರಟಿದ್ದಾರೆ, ಸರ್ಕಾರ ಏನಾಗಬಹುದು ಎಂಬುದನ್ನು ಯೋಚಿಸಬೇಕು. ಬಿಜೆಪಿ ರಚನಾತ್ಮಕವಾಗಿ ಆಲೋಚಿಸಿ ಕಾರ್ಯಕ್ರಮ ನೀಡಿ, ಜನರ ಜೀವನ ಗುಣಮಟ್ಟ ಉತ್ತಮಪಡಿಸುತ್ತದೆ ಎಂದು ಸಚಿವರು ಹೇಳಿದರು.
ಮುಸಲ್ಮಾನರನ್ನು ಸಿಎಂ ಮಾಡಲಿ
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು.
ಕುಮಾರಸ್ವಾಮಿ ಅವರ ಮಾತು ಅಗತ್ಯವೇ ಇರಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಉತ್ತಮ ಆಡಳಿತಗಾರರು. ಬಿಜೆಪಿಯು ಕುಮಾರಸ್ವಾಮಿಯವರ ಸಲಹೆ ಕೇಳುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೆಡಿಎಸ್ನಿಂದ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ. ಅವರು ಬಿಜೆಪಿಗೆ ಸವಾಲು ಹಾಕುವ ಮುನ್ನ, ಅವರಿಗೆ ಅವರೇ ಸವಾಲು ಹಾಕಿಕೊಳ್ಳಲಿ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿಯೇ ಜೀವಿಸುತ್ತಿದ್ದಾರೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.