ಮನೆ ಅಪರಾಧ ಅಪರಿಚಿತ ವಾಹನ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಅಪರಿಚಿತ ವಾಹನ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು

0

ದಾವಣಗೆರೆ(Davanagere): ಅಪರಿಚಿತ ವಾಹನವೊಂದು ಬೈಕ್​’ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆನಗೋಡ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ದಾವಣಗೆರೆ ನಗರದ ರಾಮನಗರ ನಿವಾಸಿಗಳಾದ ಪರಶುರಾಮ್ (24) ಸಂದೇಶ (23) ಶಿವು (26) ಮೃತಪಟ್ಟ ಯುವಕರು.

ಜಿಲ್ಲೆಯ ಕಾಟಿಹಳ್ಳಿ ಗ್ರಾಮದಲ್ಲಿ ದೇವಿ ಕಾರ್ಯಕ್ಕೆ ತೆರಳಿ ಊಟ ಮುಗಿಸಿಕೊಂಡು ಬೈಕ್​ನಲ್ಲಿ ರಾಮನಗರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ಒಂದೇ ಬೈಕ್’​ನಲ್ಲಿದ್ದ ತೆರಳುತ್ತಿದ್ದ ಮೂರು ಜನ ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವು ತಡರಾತ್ರಿ ಸಂಭವಿಸಿದ ಕಾರಣ ತಡವಾಗಿ ಬೆಳಕಿಗೆ ಬಂದಿದೆ.