ಮನೆ ಅಪರಾಧ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಹತ್ಯೆ

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಹತ್ಯೆ

0

ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ.

ಉದ್ಯಮಿ ಫೆ.10ರಂದು ಗೋಕಾಕ್‌’ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು.

ಹಾಗೇ ಪೊಲೀಸರು ಉದ್ಯಮಿ ರಾಜು ಝಂವರ್‌’ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ.

ಅಂತೆಯೇ ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ. ತಾನು ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ.

ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.