ಮನೆ ಅಪರಾಧ ಕೆಎಸ್’ಆರ್’ಟಿಸಿ ಬಸ್ – ಕಾರು ನಡುವೆ ಅಪಘಾತ: ಮಗು ಸಾವು, ನಾಲ್ವರು ಗಂಭೀರ

ಕೆಎಸ್’ಆರ್’ಟಿಸಿ ಬಸ್ – ಕಾರು ನಡುವೆ ಅಪಘಾತ: ಮಗು ಸಾವು, ನಾಲ್ವರು ಗಂಭೀರ

0

ಕಡಬ: ಕೆಎಸ್’ಆರ್’ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಗು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್’ಆರ್’ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದೆ.