ಬೆಂಗಳೂರು: ಅಭಿವೃದ್ಧಿಯೇ ಚುನಾವಣೆಯಲ್ಲಿ ನಮ್ಮ ಮುಖ್ಯ ಕಾರ್ಯಸೂಚಿಯಾಗಿರುತ್ತದೆ. ಆದರೆ, ಬತ್ತಳಿಕೆಯಲ್ಲಿ ಹಿಂದುತ್ವವೂ ಸೇರಿ ಉಳಿದ ಅಸ್ತ್ರಗಳೂ ಇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿಂದುತ್ವದ ಕುರಿತ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಚುನಾವಣೆಯಲ್ಲಿ ಆಯಾ ಸಂದರ್ಭಕ್ಕೆ ತಕ್ಕಂತೆ ಅಸ್ತ್ರಗಳನ್ನು ಪ್ರಯೋಗಿಸಬೇಕಾಗುತ್ತದೆ. ವರಿಷ್ಠರ ಸೂಚನೆಗೆ ಅನುಗುಣವಾಗಿಯೇ ಪ್ರಯೋಗಿಸಲಾಗುತ್ತದೆ ಎಂದರು.
ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸುವ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ರಾಜ್ಯ ಮತ್ತು ಕೇಂದ್ರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೆ ಮತ್ತು ಮನ ಮನಕ್ಕೆ ತಲುಪಿಸಲಾಗುವುದು. 224 ವಿಧಾನಸಭಾ ಕ್ಷೇತ್ರಗಳಿಗೆ ತಲುಪುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಇದರ ಅಂಗವಾಗಿ ಇದೇ 20 ರಂದು ಮಂಡ್ಯದಲ್ಲಿ ಯುವ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೇಂದ್ರದ ನಾಯಕರೂ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇದೇ ರೀತಿ ಬೇರೆ ಬೇರೆ ಜಿಲ್ಲೆಗಳಲ್ಲಿ ಇತರ ಮೋರ್ಚಾಗಳ ಸಮಾವೇಶ ನಡೆಯಲಿದೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಸಂಚಾಲಕ ಮತ್ತು ಸಹ ಸಂಚಾಲಕರನ್ನು ನೇಮಿಸಲಾಗಿದೆ. ಇದೇ 16 ರಂದು ವಿವಿಧ ಮೋರ್ಚಾಗಳ ರಾಜ್ಯ ಮಟ್ಟ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.
ಈ ಬಾರಿ ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆ ಗಳಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಗುರಿ ಹಾಕಿಕೊಳ್ಳಲಾಗಿದೆ. ಈ ಕಾರಣಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯದಲ್ಲಿ ಬೃಹತ್ ಸಭೆ ಏರ್ಪಡಿಸಿದ್ದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕ ಯಶವಂತ ಸುವರ್ಣ ಇದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.