ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.
ಹೈಕೋರ್ಟ್’ನ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಯೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ರಾಜ್ಯ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಗಳ ಸಭೆಯಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಡಾ. ಎಂ ಎ ಸಲೀಂ ಅವರು, ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದನ್ನು 15 ದಿನ ಕಾಲ ವಿಸ್ತರಿಸಬೇಕು. ಈ ಕುರಿತು ಸಾರ್ವಜನಿಕರ ಬೇಡಿಕೆಯಿದೆ ಎಂದು ಸಭೆಯಲ್ಲಿ ಮನವಿ ಮಾಡಿದರು.
ವಿಶೇಷ ಆಯುಕ್ತರ ಮತ್ತು ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಸಂಚಾರ ನಿಯಮ ಉಲ್ಲಂಘನೆ ದಂಡ ಪ್ರಕರಣದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರ ತೀರ್ಮಾನಿಸಿತು.
2 ಕೋಟಿ ಪ್ರಕರಣ -1,300 ಕೋಟಿ ದಂಡ ಬಾಕಿ: ನ್ಯಾಯಮೂರ್ತಿ ಬಿ ವೀರಪ್ಪ ಅವರು 2023ರ ಜನವರಿ 27ರಂದು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಂಚಾರ ನಿಯಮ ಉಲ್ಲಂಘನೆ ಪಾವತಿಗೆ ವಿನಾಯಿತಿ ನೀಡುವಂತೆ ಸಲಹೆ ನೀಡಿದ್ದರು. ಅದರಂತೆ ಸಾರಿಗೆ ಇಲಾಖೆಯು ಫೆಬ್ರವರಿ 3ರಿಂದ ಫೆಬ್ರವರಿ 11ರವರೆಗೆ ಶೇ.50 ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿತ್ತು. ಇದರಿಂದ ಫೆಬ್ರವರಿ 3ರಿಂದ ಫೆಬ್ರವರಿ 11ವರೆಗೆ ಒಟ್ಟು 52.11 ಲಕ್ಷ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, 152 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿತ್ತು.
ರಾಜ್ಯದಲ್ಲಿ ಇನ್ನೂ 2 ಕೋಟಿ ಸಂಚಾರ ನಿಯಮ ಉಲ್ಲಂಘನೆ ದಂಡ ಪ್ರಕರಣಗಳಿದ್ದು, 1,300 ಕೋಟಿ ರೂಪಾಯಿ ದಂಡದ ಮೊತ್ತ ಸಂಗ್ರಹಗೊಳ್ಳಬೇಕಿದೆ. ಇದರಿಂದ ಶೇ.50ರಷ್ಟು ವಿನಾಯಿತಿ ನೀಡುವುದನ್ನು ಎರಡು ವಾರ ಕಾಲ ವಿಸ್ತರಿಸಲು ಕೋರಿ ವಿಶೇಷ ಆಯುಕ್ತರಾದ (ಸಂಚಾರ ವಿಭಾಗ) ಡಾ.ಸಲೀಂ ಅವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆದು ಕೋರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಬಿ ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.