ಸಿ ಎಸ್ ಸೋಮೇಗೌಡ ಅವರು ಹೂಡಿರುವ ದಾವೆಯಲ್ಲಿ ಸತತ 10ನೇ ಬಾರಿಗೆ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಹೊರಡಿಸಿದ್ದು, ಕಳೆದ ಜನವರಿ 18ರಂದು ಬಂಧನ ವಾರೆಂಟ್ ಜಾರಿ ಮಾಡಿತ್ತು.
ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವೈ ಎಸ್ ವಿ ದತ್ತಾ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.
ಅರ್ಜಿದಾರಾದ ಎನ್ ನಿತ್ಯಾನಂದ, ಸಿ ಎಸ್ ಸೋಮೇಗೌಡ ಮತ್ತು ಪ್ರಕಾಶ್ ಜಿ ಎಸ್ ಎಂಬವರು ಪ್ರತ್ಯೇಕವಾಗಿ ವರ್ಗಾವಣೀಯ ಲಿಖಿತಗಳ ಅಧಿನಿಯಮ ಸೆಕ್ಷನ್ 138ರ ಅಡಿ ದಾಖಲಿಸಿರುವ ದಾವೆಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್ ಅವರು ನಡೆಸಿದರು.
ನಿತ್ಯಾನಂದ ಅವರು ಹೂಡಿರುವ ಪ್ರಕರಣದಲ್ಲಿ ಸತತ ನಾಲ್ಕನೇ ಬಾರಿಗೆ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಒಟ್ಟು ಐದು ಬಾರಿ ಜಾಮೀನುರಹಿತ ವಾರೆಂಟ್ ಹೊರಡಿಸಿದೆ. ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿಯ ಮೂಲಕ ಜಾಮೀನುರಹಿತ ವಾರೆಂಟ್ ಜಾರಿ ಮಾಡುವಂತೆ ಬುಧವಾರದ ಆದೇಶದಲ್ಲಿ ತಿಳಿಸಿದೆ.
ಸಿ ಎಸ್ ಸೋಮೇಗೌಡ ಅವರು ಹೂಡಿರುವ ದಾವೆಯಲ್ಲಿ ಸತತ 10ನೇ ಬಾರಿಗೆ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಹೊರಡಿಸಿದ್ದು, ಕಳೆದ ಜನವರಿ 18ರಂದು ಬಂಧನ ವಾರೆಂಟ್ ಜಾರಿ ಮಾಡಿತ್ತು. ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಅವರ ಮೂಲಕ ಮತ್ತೆ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.
2022ರ ನವೆಂಬರ್’ನಲ್ಲಿ ಪ್ರಕಾಶ್ ಜಿ ಎಸ್ ಎಂಬವರು ದತ್ತಾ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇಂದು ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.