ಮನೆ ದೇವಸ್ಥಾನ ಶಿವರಾತ್ರಿ ಜಾತ್ರೆ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ

ಶಿವರಾತ್ರಿ ಜಾತ್ರೆ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ

0

ಚಾಮರಾಜನಗರ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ ಜಾತ್ರೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ.

ಹೀಗಾಗಿ ಫೆ.17ರ ಬೆಳಿಗ್ಗೆ 6 ಗಂಟೆಯಿಂದ ಇದೇ ತಿಂಗಳ 21ರ ಸಂಜೆ 7 ಗಂಟೆ ವರೆಗೆ ದ್ವಿಚಕ್ರ ವಾಹನ‌ಗಳಿಗೆ ನಿರ್ಬಂಧ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

ದ್ವಿಚಕ್ರ ನಿಲುಗಡೆಗೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತ ಕೌದಳ್ಳಿಯಿಂದ ಬೆಟ್ಟಕ್ಕೆ ಸಾರಿಗೆ ಬಸ್ ವ್ಯವಸ್ಥೆ ಮಾಡಿದೆ. ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಹಿನ್ನೆಲೆ ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.