ಮನೆ ಅಪರಾಧ ತಮಿಳುನಾಡು ಸಚಿವರ ಪುತ್ರಿಯ ಪ್ರೇಮ ವಿವಾಹ:  ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ ಜೋಡಿ

ತಮಿಳುನಾಡು ಸಚಿವರ ಪುತ್ರಿಯ ಪ್ರೇಮ ವಿವಾಹ:  ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ ಜೋಡಿ

0

ಬೆಂಗಳೂರುತಮಿಳುನಾಡಿನ ಮುಜರಾಯಿ ಸಚಿವರಾದ ಶೇಖರ್ ಬಾಬು ಅವರ ಮಗಳು ಜಯ ಕಲ್ಯಾಣಿ ಬೆಂಗಳೂರಿನ ಸತೀಶ್ ಕುಮಾರ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದು, ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ್ದಾರೆ.

ವೃತ್ತಿಯಲ್ಲಿ ವೈದ್ಯೆಯಾಗಿರುವ ಜಯಕಲ್ಯಾಣಿ ಅವರು, ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ.ಕೆ ಶೇಖರ್ ಬಾಬು ಅವರ ಪುತ್ರಿ. ಶೇಖರ್ ಬಾಬು ಅವರು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಆಪ್ತರು ಎಂದು ಮೂಲಗಳು ತಿಳಿಸಿವೆ.

ಜಯ ಕಲ್ಯಾಣಿ ಹಾಗೂ ಅವರ ಪತಿ ಸತೀಶ್ ಅವರು  ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ, ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ. ನಾವಿಬ್ಬರೂ ಮೇಜರ್ ಆಗಿದ್ದೇವೆ ಮತ್ತು ಇಬ್ಬರು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಮಾಡಿಕೊಂಡಿದ್ದೇವೆ. ಸತೀಶ್ ಅವರ ಕುಟುಂಬಕ್ಕೆ ಈಗಾಗಲೇ ಸಾಕಷ್ಟು ಬೆದರಿಕೆ ಕರೆಗಳು ಬಂದಿದೆ ಎಂದು ಹೇಳಿಕೊಂಡಿದ್ದಾರೆ.

ನಾವಿಬ್ಬರೂ ಪರಸ್ಪರ ಒಪ್ಪಿಗೆ ಮೂಲಕ ವಿವಾಹವಾಗಿದ್ದೇವೆ. ತಮ್ಮ ಪತಿಯವರ ವಿರುಧ್ದ ಸತ್ಯಕ್ಕೆ ದೂರವಾದ ದೂರು ದಾಖಲಿಸುವ ಪ್ರಯತ್ನದ ಬಗ್ಗೆ ಅನುಮಾನವಿದ್ದು ರಕ್ಷಣೆ ನೀಡಬೇಕೆಂದು ವಿನಂತಿಸಿದರು.

ನವದಂಪತಿಗೆ ಆಶೀರ್ವಾದ ಮಾಡಿದ ಸಚಿವರು, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೊಂದಿಗೆ ಈ ವಿಷಯವಾಗಿ ಮಾತನಾಡಿ. ದಂಪತಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. ಕಮಲ್  ಪಂತ್ ಅವರನ್ನು ಭೇಟಿಯಾಗುವಂತೆ ಸಲಹೆ ನೀಡಿದರು.

ಯಾವುದೇ ಅನುಮಾನಾಸ್ಪದ ಚಲನವಲನಗಳನ್ನು ಗುರುತಿಸಿದರೆ ಅವರನ್ನು ಸಂಪರ್ಕಿಸಲು ಸಂಬಂಧಿತ ಪೊಲೀಸ್ ಸಂಪರ್ಕಗಳನ್ನು ನೀಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ದಂಪತಿಯೊಂದಿಗೆ ಸಂಪರ್ಕದಲ್ಲಿರುತ್ತಾರೆ ಮತ್ತು ಅವರ ಯೋಗಕ್ಷೇಮವನ್ನು ಪರಿಶೀಲಿಸುತ್ತಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.