ಬೆಂಗಳೂರು: ಇಂದು ಸಿಎಂ ಮಂಡನೆ ಮಾಡಿರುವ ಬಜೆಟ್, ಚುನಾವಣಾ ಆಕರ್ಷಣೆಯ ಬಜೆಟ್ ಎಂದು ರಾಜ್ಯ ರೈತ ಸಂಘಟನೆಗಳು ಒಕ್ಕೂಟ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದರು.
ಸಹಕಾರ ಸಂಘಗಳಲ್ಲಿ ನೀಡುತ್ತಿರುವ ಬಡ್ಡಿ ರಹಿತ ಕೃಷಿ ಸಾಲ 5 ಲಕ್ಷಕ್ಕೆ ಏರಿಕೆ ಮಾಡಿರುವುದು ಸ್ವಾಗತಾರ್ಹ ಈ ಯೋಜನೆಯನ್ನು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಿಗೂ ವಿಸ್ತರಿಸಬೇಕು. ಕಳಸಾ ಬಂಡೂರಿ ಯೋಜನೆ ಆರಂಭಕ್ಕೆ 80 ಕೋಟಿ ನೀಡುವುದನ್ನು ಕನಿಷ್ಠ 300 ಕೋಟಿಗೆ ಏರಿಕೆ ಮಾಡಬೇಕು ಎಂದು ಹೇಳಿದರು.
ಗೃಹಿಣಿಯರಿಗೆ ಮಾಸಿಕ ರೂ 500 ಸಹಾಯಧನ ನೀಡುತ್ತಿರುವುದು ಒಳ್ಳೆಯ ಯೋಜನೆ. 50 ಲಕ್ಷ ರೈತರಿಗೆ ಬಿತ್ತನೆ ಬೀಜ,ರಸ ಗೊಬ್ಬರ ಖರೀದಿಸಲು ಸಹಾಯಧನ ನೆರವು ನೀಡುವ ಯೋಜನೆ, ತೆಲಂಗಾಣ ರಾಜ್ಯ ಮಾದರಿಯಲ್ಲಿ ಜಾರಿ ಮಾಡಬೇಕು ಪ್ರತಿ ವರ್ಷ ಪ್ರತಿ ತಿಂಗಳು ಎಕರೆಗೆ ರೂ- 10,000 ನೀಡುತ್ತಿರುವ ರೀತಿ ನಮ್ಮ ರಾಜ್ಯದಲ್ಲೂ ಜಾರಿಯಾಗಬೇಕು ಎಂದು ಹೇಳಿದ್ದಾರೆ.
ಕಾಡುಪ್ರಾಣಿಗಳ ದಾಳಿಯಿಂದ ಜೀವ ಹಾನಿ ಆದವರಿಗೆ ಪರಿಹಾರ 15 ಲಕ್ಷಕೆ ಏರಿಕೆ ಮಾಡಿರುವುದು ಸಾಲದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
50ಲಕ್ಷ ರೈತ ಕುಟುಂಬಗಳಿಗೆ ಜೀವ ಜ್ಯೋತಿ ವಿಮಾ ಯೋಜನೆ ಜಾರಿ, ತೆಲಂಗಾಣ ಮಾದರಿಯಲ್ಲಿ ಜಾರಿಗೆ ತರುವುದು ಒಳ್ಳೆಯ ಬೆಳವಣಿಗೆ. ಕೃಷ್ಣ ಮೇಲ್ದಂಡೆ ಅಭಿವೃದ್ಧಿ ಯೋಜನೆಗೆ 5000 ಕೋಟಿ ಅನುದಾನ, 2000 ಕೆರೆಗಳ ಅಭಿವೃದ್ಧಿ ಯೋಜನೆ ಅನುಷ್ಠಾನ ಕಾರ್ಯಗತವಾದರೆ ಒಳ್ಳೆಯ ನಿರ್ಧಾರ. ಕೊರೋನಾ ಸಂಕಷ್ಟದಿಂದ ಸಮಸ್ಯೆ ಎದುರಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಆರ್ಥಿಕ ನೆರವು 10 ಲಕ್ಷ ಸಹಾಯಧನ ಘೋಷಣೆ ಮಾಡಿರುವುದನ್ನು ಸ್ವಾಗತಿಸಿದ್ದಾರೆ.
ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಉನ್ನತೀಕರಣಗೊಳಿಸಿ ಯಥನಾಲ್ ಉತ್ಪಾದನಾ ಘಟಕವನ್ನು ಆರಂಭಿಸಲು ಬಜೆಟ್ ನಲ್ಲಿ ತೀರ್ಮಾನ ಕೈಗೊಂಡಿರುವುದು, ಕಬ್ಬು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ಸಹಕಾರಿ. ಆದರೆ ರಾಜ್ಯದ ಕಬ್ಬು ಬೆಳೆಗಾರಿಗೆ ಸಕ್ಕರೆ ಕಾರ್ಖಾನೆಗಳಿಂದ ತೂಕದಲ್ಲಿ ಮೋಸ, ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಲು, ಯಾವುದೇ ಕಾರ್ಯಯೋಜನೆ ಪ್ರಕಟಿಸಿಲ್ಲ ಎಂದು ಬೇಸರಿಸಿದ್ದಾರೆ.
ಎಲ್ಲಾ ಯೋಜನೆಗಳು ಚುನಾವಣೆ ದೃಷ್ಟಿಯಲ್ಲಿ ಬಜೆಟ್ ನಲ್ಲಿ ಮಾತ್ರ ಘೋಷಣೆ ಆಗಬಾರದು, ಕಾರ್ಯರೂಪಕ್ಕೆ ಬರಬೇಕು. ಈ ದಿಕ್ಕಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುವುದು ಸೂಕ್ತ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.