ಮನೆ ರಾಜ್ಯ ಕರ್ನಾಟಕ ಬಜೆಟ್: ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

ಕರ್ನಾಟಕ ಬಜೆಟ್: ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

0

ಬೆಂಗಳೂರು: ಅತ್ಯುತ್ತಮವಾದ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು ಎಂದು ಶಾಸಕ ಬಿ.ಎಸ್‌.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸಿದ್ದು, ಬಜೆಟ್ ಕುರಿತು ಬಿ ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿಯ ಉತ್ತಮ ನಿರ್ವಹಣೆಯ ಜೊತೆಗೆ ದೀರ್ಘಕಾಲಿನ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಇಂದು ಪಕ್ಷದ ಆಶಯದಂತೆ, ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿಗೆ, ದುರ್ಬಲ ವರ್ಗ, ಮಹಿಳೆಯರ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೊಂಡಾಡಿದ್ದಾರೆ.

₹3.1ಲಕ್ಷ ಕೋಟಿ ಗಾತ್ರದ ಬಜೆಟ್’​ನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ ₹80 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರದ ಅಭಿವೃದ್ಧಿಗೆ ₹10 ಸಾವಿರ ಕೋಟಿ ಸಮೀಪದಷ್ಟು ಅನುದಾನ ಕೊಡಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.