ಮನೆ ರಾಜಕೀಯ ಕಾಂಗ್ರೆಸ್‍ ಗೆ ಎಚ್ಚರಿಕೆಯ ಗಂಟೆ: ಆರ್.ಧ್ರುವನಾರಾಯಣ್

ಕಾಂಗ್ರೆಸ್‍ ಗೆ ಎಚ್ಚರಿಕೆಯ ಗಂಟೆ: ಆರ್.ಧ್ರುವನಾರಾಯಣ್

0

ಮೈಸೂರು: ‘ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದ್ದು, ಈ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ, ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರದು. ಏಕೆಂದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್‌ ಪರ ಅಲೆ ಇದೆ. ಆದರೂ ಯಾವುದನ್ನೂ ಲಘುವಾಗಿ ಪರಿಗಣಿಸದೆ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಿದೆ. ಬಿಜೆಪಿಯು ಅಭಿವೃದ್ಧಿ ಕೆಲಸ ಮಾಡದಿದ್ದರೂ ಚುನಾವಣೆ ಬಂದಾಗ ಜಾತಿ, ಧರ್ಮ ಹಾಗೂ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಮತ ಗಳಿಸುತ್ತದೆ. ಅದಕ್ಕೆ ಪ್ರತಿತಂತ್ರ ರೂಪಿಸಬೇಕಿದೆ’ ಎಂದರು.‘ಈ ಫಲಿತಾಂಶದಿಂದ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಅಗತ್ಯವಿಲ್ಲ. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಅವರು ಎಂದೂ ಅಧಿಕಾರಕ್ಕೆ ಅಂಟಿಕೊಂಡವರಲ್ಲ. ರಾಹುಲ್‌ ಗಾಂಧಿಗೆ ಬೇಕಿದ್ದರೆ ಉಪಪ್ರಧಾನಿ ಅಥವಾ ಮಂತ್ರಿ ಆಗಬಹುದಿತ್ತು. ಆದರೆ ಅಧಿಕಾರಕ್ಕೆ ಆಸೆಪಡದೆ ಜನರ ಹಿತಕ್ಕಾಗಿ ಕೆಲಸ ಮಾಡಿದ್ದಾರೆ’ ಎಂದು ಹೇಳಿದರು.