ಮನೆ ರಾಜಕೀಯ ಕಾಂಗ್ರೆಸ್ ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತದೆ: ಜೆ.ಪಿ. ನಡ್ಡಾ

ಕಾಂಗ್ರೆಸ್ ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತದೆ: ಜೆ.ಪಿ. ನಡ್ಡಾ

0

ಬೇಲೂರು (ಹಾಸನ): ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತದೆ. ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.

ವಿಜಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಲೋಕಾಯುಕ್ತವನ್ನು ಮುಚ್ಚುವ ಮೂಲಕ‌ ಭ್ರಷ್ಟಾಚಾರ ಪೋಷಿಸಿದವರು ಸಿದ್ದರಾಮಯ್ಯ. ಆದರೆ ಬಸವರಾಜ ಬೊಮ್ಮಾಯಿ ಅವರು ಲೋಕಾಯುಕ್ತದ ಬಲವರ್ಧನೆ ಮಾಡುವ ಮೂಲಕ‌ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ ಎಂದರು.

ತುಷ್ಟೀಕರಣ ರಾಜಕಾರಣದ ಮೂಲಕ ಪಿಎಫ್ ಐ ವಿರುದ್ಧದ 156 ಪ್ರಕರಣ ಹಿಂಪಡೆದ ಸಿದ್ದರಾಮಯ್ಯ, 1600 ಜನರನ್ನು ಜೈಲಿನಿಂದ ಬಿಡಿಸಿದ್ದರು. ಇದರಿಂದ ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ಇಂಥವರನ್ನು ಬೆಂಬಲಿಸುತ್ತೀರಾ ಎಂದು ಪ್ರಶ್ನಿಸಿದರು.