ಹೈದರಾಬಾದ್: ಮೂರು ಬೀದಿ ನಾಯಿಗಳು ಒಟ್ಟಿಗೆ ನಾಲ್ಕು ವರ್ಷದ ಬಾಲಕನ ಮೇಲೆ ದಾಳಿ ಮಾಡಿ ಕಚ್ಚಿ ಸಾಯಿಸಿರುವ ಭೀಕರ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್’ನಲ್ಲಿ ನಡೆದಿದೆ.
ಭಾನುವಾರ, ಅಂಬರ್’ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಯ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಇದ್ದಕ್ಕಿದ್ದಂತೆ ದಾಳಿ ಮಾಡುತ್ತವೆ. ನಡೆದುಕೊಂಡು ಹೋಗುತ್ತಿರಬೇಕಾದರೆ ಹಿಂದಿನಿಂದ ಬಂದ ಮೂರೂ ನಾಯಿಗಳು ಕೂಡ ಸುತ್ತುವರಿದು ಕಚ್ಚಲು ಆರಂಭಿಸಿದೆ. ಅವುಗಳಿಂದ ಬಚಾವ್ ಆಗಲು ಬಾಲಕ ಪ್ರಯತ್ನಿಸುತ್ತಾನೆ. ಆದರೆ, ನಾಯಿಗಳು ಟಿ – ಶರ್ಟ್ ಹಿಡಿದು ಎಳೆದಾಡಿ ನೆಲಕ್ಕೆ ಬೀಳಿಸಿ ಬರ್ಬರವಾಗಿ ದಾಳಿ ಮಾಡಿವೆ. ಇಡೀ ದೃಶ್ಯಗಳು ಸ್ಥಳೀಯ ಸಿಸಿವಿಟಿಯಲ್ಲಿ ಸೆರೆಯಾಗಿವೆ.
ಮತ್ತೊಂದೆಡೆ, ಪ್ರದೀಪ್ನ ಚೀರಾಟ ಕೇಳಿಸಿಕೊಂಡ ಆತನ ಸಹೋದರಿ ಓಡಿ ಬಂದಿದ್ದು, ಬಳಿಕ ತಂದೆಗೆ ಮಾಹಿತಿ ನೀಡಿದ್ದಾಳೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ತಂದೆ ಗಂಗಾಧರ ನಾಯಿಗಳ ದಾಳಿಯಿಂದ ಮಗನನ್ನು ರಕ್ಷಿಸಿದ್ದಾರೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲೇ ಬಾಲಕ ಪ್ರದೀಪ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕ ಕೊಂಡೊಯ್ಯತ್ತಿದ್ದ ಆಹಾರ ಪೊಟ್ಟಣದ ವಾಸನೆ ಗ್ರಹಿಸಿದ ನಾಯಿಗಳು ದಾಳಿ ಮಾಡಿವೆ ಎಂದು ಹೈದರಾಬಾದ್ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಂದೆ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟೊತ್ತಿಗೆ ಬಾಲಕ ಮೃತಪಟ್ಟಿದ್ದ. ಬಾಲಕನ ತಂದೆ ಆಟೊಮೊಬೈಲ್ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಕುಟುಂಬ ನಿಜಾಮಾಬಾದ್ ಮೂಲದ್ದಾಗಿದೆ ಎಂದೂ ಅಧಿಕಾರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.