ಅಮೆರಿಕದ ಹಿಂಡೆನ್’ಬರ್ಗ್ ಸಂಶೋಧನಾ ಸಂಸ್ಥೆಯು ಅದಾನಿ ಸಮೂಹದ ಸಂಸ್ಥೆಗಳ ವಿರುದ್ಧ ಪ್ರಕಟಿಸಿರುವ ವರದಿ ಮತ್ತು ಆನಂತರ ಮಾರುಕಟ್ಟೆಯಲ್ಲಿ ಉಂಟಾಗಿರುವ ವಿಪ್ಲವಕ್ಕೆ ಸಂಬಂಧಿಸಿದ ವರದಿಗಾರಿಕೆ ಕುರಿತಾಗಿ ಮಾಧ್ಯಮಗಳಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಎಂ ಎಲ್ ಶರ್ಮಾ ಅವರು ಈ ವಿಚಾರವಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಕೋರಿದ್ದ ಮನವಿಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಗಮನಸೆಳೆದ ವೇಳೆ ಸಿಜೆಐ ಮೇಲಿನಂತೆ ಉತ್ತರಿಸಿದರು.
“ಮಾಧ್ಯಮಗಳ ವಿರುದ್ಧ ಯಾವುದೇ ಕಾರಣಕ್ಕೂ ನಾವು ಪ್ರತಿಬಂಧಕಾದೇಶ ಮಾಡುವುದಿಲ್ಲ. ಪ್ರಕರಣದ ಕುರಿತಾದ ಆದೇಶವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ಸಿಜೆಐ ಸ್ಪಷ್ಟಪಡಿಸಿದರು.
ಹಿಂಡನ್ ವರ್ಗ ವರದಿ ಪ್ರಶ್ನಿಸಿ ಸಲ್ಲಿಸಿರುವ ನಾಲ್ಕು ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 17ರಂದು ಆದೇಶ ಕಾಯ್ದಿರಿಸಿದೆ. ಹಿಂಡೆನ್’ಬರ್ಗ್ ವರದಿಯಿಂದ ಅದಾನಿ ಸಮೂಹವು 100 ಬಿಲಿಯನ್ ಡಾಲರ್ಗೂ ಅಧಿಕ ನಷ್ಟ ಅನುಭವಿಸಿದೆ. ಹಿಂಡೆನ್’ಬರ್ಗ್ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ನೇಥನ್ ಆಂಡರ್ಸನ್ ಮತ್ತು ಭಾರತದಲ್ಲಿರುವ ಅವರ ಸಹೋದ್ಯೋಗಿಗಳ ವಿರುದ್ಧ ಎಫ್’ಐಆರ್ ದಾಖಲಿಸಿ, ತನಿಖೆ ನಡೆಸಲು ಸೆಬಿ ಮತ್ತು ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಶರ್ಮಾ ಕೋರಿದ್ದಾರೆ. ಅಲ್ಲದೇ, ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ಮಾಡಬೇಕೂ ಎಂದು ಮನವಿ ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.