ಮನೆ ರಾಜಕೀಯ ಬಿಎಸ್’ವೈ ಛಲ–ಸಾಹಸ ನಿಜಕ್ಕೂ ಮೆಚ್ಚುವಂಥದ್ದು: ಸಿಎಂ ಬೊಮ್ಮಾಯಿ

ಬಿಎಸ್’ವೈ ಛಲ–ಸಾಹಸ ನಿಜಕ್ಕೂ ಮೆಚ್ಚುವಂಥದ್ದು: ಸಿಎಂ ಬೊಮ್ಮಾಯಿ

0

ಬೆಂಗಳೂರು: ಬಿಎಸ್‌’ವೈ ಅವರು ನಡೆದು ಬಂದ ದಾರಿ, ಮಾಡಿದ ಹೋರಾಟ ಸಾಮಾನ್ಯ ಏನಲ್ಲ. ತಾವು ಏನು ಮಾಡಬೇಕೆಂದುಕೊಂಡಿದ್ದರೋ ಅದನ್ನು ಮಾಡದೇ ಬಿಟ್ಟಿಲ್ಲ. ಅವರ ಛಲ–ಸಾಹಸ ನಿಜಕ್ಕೂ ಮೆಚ್ಚುವಂಥದ್ದು. ನಮಗೆಲ್ಲ ಮಾದರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ–ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಹೇಳಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್‌, ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪುರ್, ಜೆಡಿಎಸ್‌’ನ ಸಾ.ರಾ.ಮಹೇಶ್‌ ಮತ್ತು ಇತರರು ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿ, ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದನ್ನು ಸ್ಮರಿಸಿಕೊಂಡರು.