ವಿಜಯಪುರ: ವಿಜಯಪುರ ನಗರದಲ್ಲಿ ಇನ್ನು ಮೇಲೆ ಯಾವ ಟಿಪ್ಪು ಸುಲ್ತಾನ್ ಆರಿಸಿ ಬರೋದಿಲ್ಲ, ಶಿವಾಜಿ ಮಹಾರಾಜರ ವಂಶದವರೇ ಆರಿಸಿ ಬರೋದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಭಾನುವಾರ ಇಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, . ಅಪ್ಪಿತಪ್ಪಿ ಸಹಿತ ಸಾಬ್ರಿಗೆ ವೋಟ್ ಹಾಕಬಾರದು ಎಂದು ತಿಳಿಸಿದ್ದಾರೆ.
ಗೌಡ್ರೇ, ವಿಜಯಪುರದಲ್ಲಿ ಒಂದು ಲಕ್ಷ ಟಿಪ್ಪು ಸುಲ್ತಾನರಿದ್ದಾರೆ. ಆದರೂ ಶಿವಾಜಿ ಮಹಾರಾಜನ ವಂಶದ ನೀವು ಹೆಂಗೆ ಆರಿಸಿ ಬರುತ್ತೀರಿ? ಎಂದು ರಾಜ್ಯದ ಅನೇಕ ಶಾಸಕರು ನನ್ನನ್ನ ಕೇಳುತ್ತಾರೆ ಎಂದರು.
ಟಿಪ್ಪು ಸುಲ್ತಾನನ ಮೆರವಣಿಗೆ ಮಾಡುವ ನಾಲಾಯಕ್ ಹಿಂದೂಗಳು ನಮ್ಮ ದೇಶದಲ್ಲಿ ಇದ್ದಾರೆ. ನಾನು ಹಿಂದೂ ಇದ್ದೀನಿ, ಆದರೆ, ಹಿಂದುತ್ವ ಒಪ್ಪಲ್ಲ, ನಾನು ಅಪ್ಪಗೆ ಹುಟ್ಟಿದ್ದು ಖರೆ ಐತಿ, ಆದರೆ, ಗ್ಯಾರಂಟಿ ಇಲ್ಲ. ನಾನು ಕುಂಕುಮ ಹಚ್ಚಿಕೊಳ್ಳಲ್ಲ, ಸಾಬರ ಟೊಪ್ಪಿ ಹಾಕಿಕೊಳ್ಳುತ್ತೇನೆ. ನಾನು ರೇಷ್ಮೆ ಪಟಗಾ ಸುತ್ತಿಕೊಳ್ಳಲ್ಲ, ಸಾಬರು ಹಾಕುವ ಟೊಪ್ಪಿ ಹಾಕಿಕೊಳ್ಳುತ್ತೇನೆ ಎಂದೆಲ್ಲ ವೋಟಿಗಾಗಿ ನಾಟಕ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.
ಈ ಚುನಾವಣೆಯಲ್ಲಿ ನನ್ನನ್ನ ಸೋಲಿಸಲು ಬೆಂಗಳೂರಿನಿಂದ ಒಬ್ಬ(ಬಿ.ವೈ.ವಿಜಯೇಂದ್ರ), ಮಗ್ಗಲು ಜಿಲ್ಲೆಯಿಂದ (ಮುರುಗೇಶ ನಿರಾಣಿ) ಇನ್ನೊಬ್ಬ ₹50 ಕೋಟಿ ಹಣ ಕಳುಹಿಸುತ್ತಾರೆ. ಆದರೆ, ನೀವು ಆ ಹಣ ತಗೊಂಡು ಚಲೊ ಊಟ ಮಾಡಿ. ವೋಟ್ ಮಾತ್ರ ನನಗೆ ಹಾಕಿ ಎಂದು ಕೋರಿದರು.














