ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಪಕ್ಷ. ಈಗ ಪ್ರೀತಿಯ ಮಳೆ ಸುರಿಸುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಡಿಯೂರಪ್ಪ ವಿರುದ್ಧ ಕೇಸು ದಾಖಲಿಸಿತು. ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ ಮತ್ತು ಅಂದಿನ ರಾಜ್ಯಪಾಲರು ಮಸಲತ್ತು ನಡೆಸಿ ಜೈಲಿಗೆ ಹೋಗುವಂತೆ ಮಾಡಿದರು. ಇದರಲ್ಲಿ ಸೋನಿಯಗಾಂಧಿ ಪಾತ್ರವೂ ಇದೆ ಎಂದು ತಿಳಿಸಿದರು.
ಎನ್’ಡಿಎ ಸರ್ಕಾರ ಸಿಬಿಐ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ದೂರುತ್ತಿದೆ. ಆಗ ಯುಪಿಎ ಸರ್ಕಾರ ದುರ್ಬಳಕೆ ಮಾಡಿಕೊಂಡಿಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಬಿಜೆಪಿಯ ವಿಜಯಸಂಕಲ್ಪ ರಥಯಾತ್ರೆಯ ನಾಲ್ಕನೇ ತಂಡದ ನೇತೃತ್ವ ವಹಿಸಿರುವ ಹೇಳಿದ್ದಾರೆ.
‘ಕಾಂಗ್ರೆಸ್ ಮುಕ್ತ ಕರ್ನಾಟಕ’ ಮಾಡಲು ವಿಜಯ ಸಂಕಲ್ಪ ರಥ ಯಾತ್ರೆ ನಿರ್ಣಾಯಕ ಯಾತ್ರೆಯಾಗಲಿದೆ ಎಂದು ತಿಳಿಸಿದರು.
ನಮ್ಮ ಅಶ್ವಮೇಧದ ಕುದುರೆಗಳನ್ನು ಬಿಟ್ಟಿದ್ದೇವೆ. ಕಟ್ಟಿ ಹಾಕುವ ಧೈರ್ಯ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಇಲ್ಲ. ಅಂತಿಮವಾಗಿ ಜಯ ನಮ್ಮದೇ. ಒಂದೇ ಸಲಕ್ಕೆ ಪಕ್ಷದ ಹವಾ ಏಳಲಿದೆ. ಈವರೆಗೆ ಮಾಡಿರುವ ಎಲ್ಲ ಸಮೀಕ್ಷೆಗಳಲ್ಲೂ ನಮ್ಮ ಪಕ್ಷವೇ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿವೆ. ಹೀಗಾಗಿ ಮತ್ತೆ ನಾವೇ ಅಧಿಕಾರದ ಗದ್ದುಗೆ ಏರಲಿದ್ದೇವೆ ಎಂದರು.
ಇಂದಿನಿಂದ ನಾಲ್ಕು ವಿಜಯ ಸಂಕಲ್ಪ ಯಾತ್ರೆಗಳು ಆರಂಭವಾಗಲಿವೆ. ನಾಲ್ಕನೇ ಯಾತ್ರೆ ಇದೇ 3 ರಂದು ಆವಟಿಯ ಚೆನ್ನಕೇಶವ ದೇವಾಲಯದ ಆವರಣದಿಂದ ಆರಂಭವಾಗಲಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಆ ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು, 30 ರಿಂದ 40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ನನ್ನ ನೇತೃತ್ವದ ತಂಡದಲ್ಲಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ. ಗೋಪಾಲಯ್ಯ,ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಸೇರಿ ಹಲವು ಶಾಸಕರು, ವಿಧಾನಪರಿಷತ್ ಸದಸ್ಯರ ಇರಲಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಯಾತ್ರೆ ನಡೆಯಲಿದೆ. ಒಟ್ಟು 17 ಸಾರ್ವಜನಿಕ ಸಭೆಗಳು, 7 ಮೋರ್ಚಾಗಳ ಸಭೆಯೂ ನಡೆಯಲಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ ಎಂದು ವಿವರಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.