ಮನೆ ರಾಜ್ಯ ಶಿವಾಜಿ ಮಹಾರಾಜರ ಮಾದರಿಯಲ್ಲಿ ಮತಾಂಧರನ್ನು ಎದುರಿಸಿ: ಪ್ರಮೋದ್ ಮುತಾಲಿಕ್

ಶಿವಾಜಿ ಮಹಾರಾಜರ ಮಾದರಿಯಲ್ಲಿ ಮತಾಂಧರನ್ನು ಎದುರಿಸಿ: ಪ್ರಮೋದ್ ಮುತಾಲಿಕ್

0

ಶಿರಸಿ: ಛತ್ರಪತಿ ಶಿವಾಜಿ ಮಹಾರಾಜರ ವಿಚಾರ ಇಂದಿಗೂ ಪ್ರಸ್ತುತವಿದೆ. ಭಾರತದ ಗಡಿ ಸುತ್ತಲೂ ಇಸ್ಲಾಮೀಕರಣದ ವಾತಾವರಣ ಹೆಚ್ಚುತ್ತಿದೆ. ಶಿವಾಜಿ ಮಹಾರಾಜರ ಮಾದರಿಯಲ್ಲಿ ಮತಾಂಧರನ್ನು ಎದುರಿಸಬೇಕಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿ ಬುಧವಾರ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದಲ್ಲಿಅವರು ಮಾತನಾಡಿದರು.

ಇಂದು ಮನೆ ಮನೆಯಲ್ಲಿ ಜೀಜಾಮಾತೆಯ ಅವಶ್ಯಕತೆಯಿದೆ. ರಾಷ್ಟ್ರಕ್ಕಾಗಿ, ಧರ್ಮಕ್ಕಾಗಿ, ಸಂಸ್ಕೃತಿಗಾಗಿ ಮನೆಯ ಮಕ್ಕಳನ್ನು ಹೋರಾಡಲು ಸಜ್ಜುಗೊಳಿಸುವ ಜೀಜಾಮಾತೆಯರು ಪ್ರತಿ ಮನೆಯಿಂದ ಬರಬೇಕಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಕೊಟ್ಟ ಸಂಸ್ಕಾರ ಎಂದಿಗೂ ನನ್ನನ್ನು ಹಿಂದೆ ಸರಿಯುವಂತೆ ಮಾಡುವುದಿಲ್ಲ. ಹಿಂದೂ ಸಮಾಜಕ್ಕಾಗಿ ನಿಸ್ವಾರ್ಥದಿಂದ ಬದುಕುತ್ತಿದ್ದೇನೆ. ದೇಶ ಆಳಿದ ಕಾಂಗ್ರೆಸ್ ಅಪ್ಜಲ್ ಖಾನ್, ಟಿಪ್ಪು ಸುಲ್ತಾನನ ಸಂತತಿಯಾಗಿದೆ. ಕಾಂಗ್ರೆಸ್ ದೇಶವನ್ನು ಬರ್ಬಾದ್ ಮಾಡಿದೆ. ಕಾಶ್ಮೀರದಲ್ಲಿಈಗಲೂ ಹಿಂದೂಗಳ ಹತ್ಯೆಯಾಗುತ್ತಿದೆ. ಹಿಂದೂಗಳನ್ನು ಸಂರಕ್ಷಿಸುವ ಕಾರ್ಯ ಎಲ್ಲರಿಂದ ನಡೆಯಬೇಕು ಎಂದರು. ಹಿಂದೂಗಳ ಹೆಸರಿನಲ್ಲಿ ಗೆದ್ದು, ಗೋಮಾತೆಯ ಹತ್ಯೆ ಖಂಡಿಸದ, ಭ್ರಷ್ಟಾಚಾರ ವಿರೋಧಿಸದ ಜನಪ್ರತಿನಿಧಿಗಳನ್ನು ಐದಾರು ಬಾರಿ ಶಾಸಕ-ಸಂಸದರನ್ನಾಗಿ ಆರಿಸುತ್ತಿರುವುದು ದೌರ್ಭಾಗ್ಯದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.