ತೆಲಂಗಾಣ: ರಸ್ತೆ ಬದಿಯಿದ್ದ ಗುಡಿಸಲಿನ ಮೇಲೆ ಲಾರಿ ಹರಿದ ಪರಿಣಾಮ ನಿದ್ದೆಯಲ್ಲಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.
ಬಾಬು ರಾಠೋಡ್, ಕಮಲಿಬಾಯ್ ಮತ್ತು ಬಸಪ್ಪ ರಾಠೋಡ್ ಮೃತರೆಂದು ತಿಳಿದುಬಂದಿದೆ.
ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿದ್ದ ಲಾರಿ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಹರಿದಿದೆ. ಇದರಿಂದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್’ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ.
ಮಿಯಾಪುರ ಎಸಿಪಿ ನರಸಿಂಹರಾವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸ್ಥಳದಲ್ಲಿ ಲಾರಿ ಅರ್ಧ ಕಿಲೋಮೀಟರ್ಗೂ ಹೆಚ್ಚು ದೂರ ಕಂಬಿಬೇಲಿಯನ್ನು ನಾಶ ಮಾಡಿದೆ. ಅತಿಯಾದ ವೇಗ ಮತ್ತು ಚಾಲಕನ ನಿದ್ದೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.