ಮೈಸೂರು: ಹಿಂದುತ್ವ ಬಿಜೆಪಿಗೆ ಚುನಾವಣೆಗೆ ಬಂದಾಗ ನೆನಪಾಗುತ್ತದೆ. ಈ ಬಾರಿ ಅವರ ಆಟ ಫಲಿಸದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಗುರುವಾರ ಇಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ,ನಮ್ಮದು ದೇವರನ್ನು ನಂಬಿರುವ ಪಕ್ಷ. ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಕರು ಜೆಡಿಎಸ್ ಪಂಚರತ್ನ ಯಾತ್ರೆಗೆ ಬರುತ್ತಿದ್ದಾರೆ ಎಂದರು.
ಪಂಚರತ್ನ ಯಾತ್ರೆಯ ಸಮಾರೋಪ ಚಾಮುಂಡೇಶ್ವರಿ ಸನ್ನಿಧಿಯ ಮೈಸೂರಿನಲ್ಲಿ ಇದೇ 22ರಿಂದ 26ರೊಳಗೆ ನಡೆಯಲಿದ್ದು, 10 ಲಕ್ಷ ಕಾರ್ಯಕರ್ತರು, ನಾಗರಿಕರು ಸೇರಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿದ್ದರಿಂದಲೇ ಪಕ್ಷಕ್ಕೆ ಹಿನ್ನಡೆಯಾಯಿತು. ಈ ಬಾರಿ ಯಾರೊಂದಿಗೂ ಮೈತ್ರಿ ಇಲ್ಲ . ಜೆಡಿಎಸ್’ಗೆ ಮತ ನೀಡಿದರೆ ವ್ಯರ್ಥ. ಬಿಜೆಪಿಯ ಬಿ ಟೀಂ. 15 ಸ್ಥಾನವೂ ಬರುವುದಿಲ್ಲವೆಂದು ಆರೋಪಿಸುವವರ ನಂಬಿಕೆಗೆ ಒಳಗಾಗಿ ದೇಶದ ಜಾತ್ಯತೀತತೆ ಉಳಿಸಲು ಮೈತ್ರಿ ಸರ್ಕಾರ ಮಾಡಿದ್ದೆವು. ಅದರಿಂದಲೇ ಹಿನ್ನಡೆಯಾಯಿತು ಎಂದರು.
ಬಿಜೆಪಿಯ ಲಿಂಗಾಯತ ಅಸ್ತ್ರ ಈ ಚುನಾವಣೆಯಲ್ಲಿ ನಡೆಯುವುದಿಲ್ಲ. ಹೀಗಾಗಿಯೇ ಬಿ.ಎಸ್.ಯಡಿಯೂರಪ್ಪ ಅವರನ್ನು ಮೋದಿ ಆಲಿಂಗನ ಮಾಡುತ್ತಿದ್ದಾರೆ.ಪಂಚಮಸಾಲಿ ಸಮುದಾಯದ ಸ್ವಾಮೀಜಿ ಅವರಿಂದ 800 ಕಿ.ಮೀ ಪಾದಯಾತ್ರೆ ಮಾಡಿಸಿದ ಬಿಜೆಪಿ, ಒಳಮೀಸಲಾತಿ ವಿಚಾರವಾಗಿಯೂ ಹುಡುಗಾಟಿಕೆ ಮಾಡಿತು. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಈ ಬಾರಿ ಎಷ್ಟು ಸ್ಥಾನ ಗೆಲ್ಲಲಿದೆ ಎಂಬುದು ಗೊತ್ತಾಗಲಿದೆ ಎಂದರು.
ಯಡಿಯೂರಪ್ಪ ಎರಡು ವರ್ಷ ಮುಖ್ಯಮಂತ್ರಿಯಾಗಿದ್ದ ವೇಳೆ ದೆಹಲಿಗೆ ಹೋದಾಗ ಪ್ರಧಾನಿ, ಗೃಹಸಚಿವರು ಭೇಟಿಗೂ ಸಿಗದೆ ಅವಮಾನ ಮಾಡಿದ್ದರು. ಈಗ ನರೇಂದ್ರ ಮೋದಿ ಅವರೇ ಯಡಿಯೂರಪ್ಪ ಅವರನ್ನು ಆಲಿಂಗನ ಮಾಡಿ ಕೈ ಹಿಡಿದು ಹೋಗುತ್ತಿದ್ದಾರೆ. ಏಕೆ ಈ ಹೊಸ ಬದಲಾವಣೆ ಎಂದು ಪ್ರಶ್ನಿಸಿದರು.
2023ರ ಚುನಾವಣೆ ಮೂರು ಪಕ್ಷಗಳಿಗೂ ಅಗ್ನಿ ಪರೀಕ್ಷೆಯಾಗಿದೆ. ಫಲಿತಾಂಶದ ಮೇಲೆ ಕಾಂಗ್ರೆಸ್, ಬಿಜೆಪಿ ಭವಿಷ್ಯ ನಿಂತಿದೆ. ಬಿಜೆಪಿ ನಾಯಕರೊಬ್ಬರು ಜೆಡಿಎಸ್ ಭವಿಷ್ಯ ತೆಲಂಗಾಣದಲ್ಲಿದ್ದು, ಅಲ್ಲಿಗೆ ಹೋಗಬೇಕೆಂದು ಹೇಳಿದ್ದಾರೆ. ಕರ್ನಾಟಕ ಬಿಟ್ಟು ಯಾರು ಹೋಗುತ್ತಾರೆ ಎಂದು ಜನ ತೀರ್ಮಾನಿಸುತ್ತಾರೆ ಎಂದು ವ್ಯಂಗ್ಯವಾಡಿದರು.
ಉರಿಗೌಡ, ನಂಜೇಗೌಡ ಸುಳ್ಳು ಇತಿಹಾಸದ ಕಥೆ ಕಟ್ಟಿದ್ದಾರೆ. ಇತಿಹಾಸವನ್ನು ಬಿಜೆಪಿಯವರೇ ಬರೆಯಲು ಹೊರಟಿದ್ದಾರೆ. ಇಂಥ ತಂತ್ರಗಳು ಫಲಿಸವು. ಮಂಡ್ಯ ಹಾಗೂ ಮೈಸೂರಿನಲ್ಲೂ ಮೊದಲ ಸ್ಥಾನದಲ್ಲಿ ನಾವಿರಲಿದ್ದೇವೆ. ಹಾಸನದಲ್ಲಿ 7 ಕ್ಷೇತ್ರ ಗೆಲ್ಲಲಿದ್ದೇವೆ. 123 ಸ್ಥಾನ ಗೆದ್ದು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದ್ದೇವೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.