ಮನೆ ಅಪರಾಧ ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ

ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ

0

ಬೆಂಗಳೂರು: ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಅಧ್ಯಕ್ಷರ ಪರವಾಗಿ 40 ಲಕ್ಷ ರೂ ಲಂಚ ಪಡೆಯುವ ಸಂದರ್ಭದಲ್ಲಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯೂಎಸ್’ಎಸ್’ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೆ.ಎಸ್.ಡಿ.ಎಲ್ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ಕೊಡಿಸಲು ಟೆಂಡರ್ ಕೊಡಿಸಲು ಪ್ರಶಾಂತ್ 80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 40 ಲಕ್ಷ ರೂ.ಗಳನ್ನು ಬೆಂಗಳೂರು ಕ್ರೆಸೆಂಟ್ ನಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲಿ ಪಡೆಯುವ ವೇಳೆ 10 ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ.

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಶಾಸಕರಾಗಿರುವ ಮಾಡಾಳ್ ವಿರೂಪಾಕ್ಷಪ್ಪ, ಕೆ.ಎಸ್.ಡಿ.ಎಲ್ ನ ಅಧ್ಯಕ್ಷರು ಕೂಡ ಆಗಿದ್ದಾರೆ.