ಕಲಬುರಗಿ: ‘ಕಪ್ಪು ಮೈಬಣ್ಣ’ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಘಟನೆ ಜೇವರ್ಗಿ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಫರ್ಜಾನಾ ಬೇಗಂ (28) ಎಂದು ಗುರುತಿಸಲಾಗಿದೆ. ಮೂಲತಃ ಯಾದಗಿರಿ ಜಿಲ್ಲೆಯ ಶಹಪೂರ್ ಮೂಲದ ಫರ್ಜಾನಾ ಬೇಗಂ ವಿವಾಹ, ಕೆಲ್ಲೂರು ಗ್ರಾಮದ ಖಾಜಾ ಪಟೇಲ್ ಜೊತೆ 7 ವರ್ಷಗಳ ಹಿಂದೆ ಆಗಿತ್ತು. ದಂಪತಿಗೆ ನಾಲ್ಕು ಮತ್ತು ಎರಡು ವರ್ಷದ ಇಬ್ಬರು ಮಕ್ಕಳಿದ್ದಾರೆಂದು ತಿಳಿದುಬಂದಿದೆ.
ಮದುವೆಯಾಗಿ ಮಕ್ಕಳಾದ ಬಳಿಕ ಪತ್ನಿಗೆ ನಿನ್ನ ಮೈಬಣ್ಣ ಕಪ್ಪು ಎಂದು ಚಿತ್ರಹಿಂಸೆ ನೀಡಲು ಆರಂಭಿಸಿದ್ದಾನೆ. ನಿನ್ನೆ ಮುಖಕ್ಕೆ ಎಷ್ಟೇ ಪೌಡರ್ ಹಚ್ಚಿದರೂ ಹಿರೋಯಿನ್ ಆಗಲು ಆಗುವುದಿಲ್ಲ ಎಂದು ಸದಾ ನಿಂದಿಸಲು ಆರಂಭಿಸಿದ್ದಾನೆ. ಈ ವಿಷಯವನ್ನು ಫರ್ಜಾನಾ ತನ್ನ ಪೋಷಕರಿಗೆ ತಿಳಿಸಿ, ನೊಂದುಕೊಂಡಿದ್ದಾಳೆ.
ದಿನ ಕಳೆದಂತೆ ಪಟೇಲ್ ಪತ್ನಿಗೆ ವರದಕ್ಷಿಣಿ ಕಿರುಕುಳ ನೀಡಲು ಆರಂಭಿಸಿದ್ದಾರೆ. ನನ್ನ ಸ್ಥಾನಮಾನಕ್ಕೆ ನೀನು ಹೊಂದಿಕೆಯಾಗುವುದಿಲ್ಲ ಎಂದು ಕಿರುಕುಳ ನೀಡಿದ್ದಾನೆ. ಈ ಬೆಳವಣಿಗೆ ಬೆನ್ನಲ್ಲೇ ಬುಧವಾರ ರಾತ್ರಿ ಫರ್ಜಾನಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಕೆಲ್ಲೂರಿನ ಹಾಲಿನ ವ್ಯಾಪಾರಿಯೊಬ್ಬರು ಸಾವಿನ ವಿಚಾರವನ್ನು ಫರ್ಜಾನಾ ಅವರ ಕುಟುಂಬಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಬಳಿಕ ಘಟನೆ ಬೆಳಕಿಗೆ ಬಂದಿದೆ. ಶವದ ಪಕ್ಕದಲ್ಲಿ ಮಕ್ಕಳಿಬ್ಬರು ರೋಧಿಸಿರುವುದು ಕಂಡುಬಂದಿದ್ದು, ಈ ವೇಳೆ ಕುಟುಂಬಸ್ಥರು ಯಾರೂ ಕಂಡು ಬಂದಿಲ್ಲ. ಎಲ್ಲರೂ ಪರಾರಿಯಾಗಿದ್ದಾರೆಂದು ಫರ್ಜಾನಾ ಅವರ ಪೋಷಕರು ಹೇಳಿದ್ದಾರೆ.
ಇದೀಗ ಅಳಿಯ ಖಾಜಾ ಪಟೇಲ್ ವಿರುದ್ಧ ಫರ್ಜಾನಾ ಕುಟುಂಬಸ್ಥರು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಲಬುರಗಿ ಗ್ರಾಮಾಂತರ ಡಿವೈಎಸ್ಪಿ ಉಮೇಶ ಚಿಕ್ಕಮಠ ಮಾತನಾಡಿ, ಈ ಸಂಬಂಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ. ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಹೇಳಿದ್ದಾರೆ.
ಫರ್ಜಾನಾ ಸಾವಿನ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಜೆಎಂಎಸ್ ತಂಡವನ್ನು ಕೆಲ್ಲೂರಿಗೆ ಕಳುಹಿಸಲಿದೆ ಎಂದು ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ರಾಜ್ಯ ಘಟಕದ ಉಪಾಧ್ಯಕ್ಷೆ ನೀಲಾ ಕೆ ಅವರು ತಿಳಿಸಿದ್ದಾರೆ.
“ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಚಿತ್ರಹಿಂಸೆ ಆರೋಪಗಳು ನಿಜವಾಗಿದ್ದರೂ ಆ ಸಾವನ್ನು ಕೊಲೆ ಎಂದೇ ಪರಿಗಣಿಸಲಾಗುತ್ತದೆ”. ಮಹಿಳಾ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿ ಘಟನೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.