ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಮತ್ತೆ 15 ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ.
ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಮಾರ್ಚ್ 4ರಿಂದ 15 ದಿನಗಳ ಒಳಗೆ ದಂಡ ಪಾವತಿ ಮಾಡಬಹುದಾಗಿದೆ.
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮಾತ್ರವಲ್ಲದೇ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ಕೇಳಿಬಂದಿತ್ತು.
ಅದರಂತೆ ಫೆಬ್ರವರಿ 14 ರಂದು ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶ ವಿಸ್ತರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕಳೆದ ಬಾರಿ ಸುಮಾರು 44 ತರಹದ ನಿಯಮಗಳ ಉಲ್ಲಂಘನೆ ದಂಡದಲ್ಲಿ ರಿಯಾಯಿತಿ ನೀಡಲಾಗಿತ್ತು. ಈ ಬಾರಿಯೂ ಅದು ಹಾಗೆಯೇ ಮುಂದುವರಿಯಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.