ಮನೆ ರಾಜ್ಯ ಕರ್ನಾಟಕದಲ್ಲಿರುವ 40 ಪರ್ಸೆಂಟೇಜ್ ಭ್ರಷ್ಟಾಚಾರದ ಸರ್ಕಾರ ಕಿತ್ತೊಗೆಯಬೇಕು: ಅರವಿಂದ ಕೇಜ್ರಿವಾಲ್​ ​

ಕರ್ನಾಟಕದಲ್ಲಿರುವ 40 ಪರ್ಸೆಂಟೇಜ್ ಭ್ರಷ್ಟಾಚಾರದ ಸರ್ಕಾರ ಕಿತ್ತೊಗೆಯಬೇಕು: ಅರವಿಂದ ಕೇಜ್ರಿವಾಲ್​ ​

0

ಹುಬ್ಬಳ್ಳಿ: ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ. ಕರ್ನಾಟಕದಲ್ಲಿರುವ 40 ಪರ್ಸೆಂಟೇಜ್  ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಆಮ್​ ಆದ್ಮಿ ಪಕ್ಷವನ್ನು ಬಲವರ್ಧನೆ ಮಾಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ​ಹೇಳಿದ್ದಾರೆ.

ಶುಕ್ರವಾರ ತಡರಾತ್ರಿ ರಾಜ್ಯಕ್ಕೆ ಆಗಮಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ನಗರದ ಖಾಸಗಿ ಹೋಟೆಲ್​ನಲ್ಲಿ ದಾವಣಗೆರೆಗೆ ತೆರಳುವ ಮುನ್ನ ಮಾತನಾಡಿ, ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಕರ್ನಾಟಕದಲ್ಲಿಯೂ ಪ್ರಾಮಾಣಿಕ ಸರ್ಕಾರವನ್ನು ನಾವು ನಡೆಸುತ್ತೇವೆ. ಆ ನಿಟ್ಟಿನಲ್ಲಿ ಆಮ್​ ಆದ್ಮಿ ಪಕ್ಷವನ್ನು ಬಲವರ್ಧನೆ ಮಾಡ್ತೇವೆ ಎಂದರು.

ಕರ್ನಾಟಕದಲ್ಲಿರೋ ರೈತರ ಸಮಸ್ಯೆಗೆ ಮೂಲವಾಗಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್ ರೈತರು ಉಗ್ರ ಚಳುವಳಿ ನಡೆಸಿದರು. ಹಾಗಾಗಿ, ಕೇಂದ್ರ ಸರ್ಕಾರವು ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದರು. ಆದರೆ, ಕರ್ನಾಟಕದಲ್ಲಿ ಇಂಥ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆದ ಉದಾಹರಣೆಗಳೇ ಇಲ್ಲ ಎಂದು ಹೇಳಿದರು.

ಇಲ್ಲಿನ ರೈತರು ಆತ್ಮಹತ್ಯೆಗೆ ಶರಣಾಗ್ತಿದ್ದಾರೆ. ನಾವು ಒಪಿಎಸ್ ಜಾರಿಗೆ ತಂದಿದ್ದೇವೆ. ಇಲ್ಲಿ ಇನ್ನೂ ಒಪಿಎಸ್ ಜಾರಿಗೆ ತಂದಿಲ್ಲ. ಕರ್ನಾಟಕದ ರೈತರ ಸಮಸ್ಯೆಗಳನ್ನ ಆಮ್ ಆದ್ಮಿ ಪಾರ್ಟಿ ಖಂಡಿತವಾಗಿಯೂ ಬಗೆಹರಿಸುತ್ತೆ. ಸ್ವಚ್ಛ, ಭ್ರಷ್ಟಾಚಾರ ಮುಕ್ತ ಸರ್ಕಾರ ತರುತ್ತೇವೆ ಎಂದು ಹೇಳಿದರು.

ಇದೇ ವೇಳೆ, ಪಂಜಾಬ್ ಸಿಎಂ ಭಗವಂತ್ ಮಾನ್ ಮಾತನಾಡಿ, ಉಚಿತ ವಿದ್ಯುತ್, ನಿರುದ್ಯೋಗ ನಿವಾರಣೆ, ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪಂಜಾಬ್ ಮತ್ತು ದೆಹಲಿ ಮಾದರಿಯಲ್ಲಿ ಇಲ್ಲಿಯ ಜನರೂ ಎಎಪಿ ಸರ್ಕಾರ ತರಬೇಕು. ಆಸ್ಟ್ರೇಲಿಯಾದಲ್ಲಿ ಖಲಿಸ್ತಾನದವರಿಂದ ಹಿಂದೂ ದೇವಸ್ಥಾನ ಧ್ವಂಸ ವಿಚಾರವಾಗಿ ಮಾತನಾಡಿದ ಅವರು, “ಭಾರತದಲ್ಲಿ ನಾವು ಭಾತೃತ್ವದಿಂದ ಇದ್ದೇವೆ. ಇಲ್ಲಿ ಆ ರೀತಿ ಆಗಿಲ್ಲ. ಖಲಿಸ್ತಾನ ಪ್ರತ್ಯೇಕತೆ ಹೋರಾಟದ ಬಗ್ಗೆ ನಿಗಾ ಇಟ್ಟಿದ್ದೇವೆ ಎಂದು ಹೇಳಿದರು.