ಪ್ರತಿಭಟಿಸುವ ಹಕ್ಕು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಪರವಾನಗಿಯನ್ನು ಪ್ರತಿಭಟನಾಕಾರರಿಗೆ ನೀಡುವುದಿಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಇ- ಟೆಂಡರ್ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಯೋಜನೆ ಜಾರಿಗೊಳಿಸುವುದನ್ನು ವಿರೋಧಿಸಿ ಹರ್ಯಾಣದಲ್ಲಿ ಬಿಜೆಪಿ- ಜೆಜೆಪಿ ಸರ್ಕಾರದ ವಿರುದ್ಧ ಸರಪಂಚ್ಗಳು (ಗ್ರಾಮ ಪ್ರಧಾನರು) ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ರಸ್ತೆಗಳಲ್ಲಿ ಹಾಕಲಾಗಿದ್ದ ದಿಗ್ಬಂಧನಗಳನ್ನು ತೆರವುಗೊಳಿಸುವಂತೆ ಈ ಮೂಲಕ ನ್ಯಾಯಾಲಯ ಆದೇಶಿಸಿದೆ.
ಪಂಚಕುಲದಲ್ಲಿ ಪ್ರತಿಭಟನಾ ನಿರತ ಸರಪಂಚರು ಮತ್ತು ಹರ್ಯಾಣ ಸರ್ಕಾರದ ನಡುವಿನ ಬಿಕ್ಕಟ್ಟಿನ ಕುರಿತು ಶನಿವಾರ ನಡೆದ ನ್ಯಾಯಾಲಯದ ವಿಶೇಷ ಕಲಾಪದ ವೇಳೆ ಈ ಅವಲೋಕನ ಮಾಡಲಾಯಿತು.
ಪಂಚಕುಲ ಮತ್ತು ಚಂಡೀಗಢ ಸಂಪರ್ಕಿಸುವ ರಸ್ತೆಯನ್ನು ತೆರವುಗೊಳಿಸುವಂತೆ ನ್ಯಾಯಮೂರ್ತಿಗಳಾದ ಆಗಸ್ಟಿನ್ ಜಾರ್ಜ್ ಮಸಿಹ್ ಮತ್ತು ವಿಕ್ರಮ್ ಅಗರ್ವಾಲ್ ಅವರಿದ್ದ ವಿಭಾಗೀಯ ಪೀಠ, ಹರ್ಯಾಣ ಪೊಲೀಸರಿಗೆ ಆದೇಶಿಸಿತು. ಮಾರ್ಚ್ 2ರಿಂದ ಸರಪಂಚರು ಇಡೀ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ನಾಗರಿಕರಿಗೆ ಅದರಲ್ಲಿಯೂ ಎರಡೂ ನಗರಗಳ ನಡುವೆ ಪ್ರಯಾಣಿಸುವವರಿಗೆ ಅನಾನುಕೂಲ ಉಂಟಾಗಿತ್ತು.
“ಸಂಘಟನೆಗಳು, ಸಂಘಗಳು ಅಥವಾ ಜನ ಸಮುದಾಯದ ಪ್ರತಿಭಟನೆಗೆ ಅನುಮತಿ ಇದ್ದರೂ ಅವರು ನಿಗದಿತ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಇದೆ. ಆದರೆ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡುವುದಷ್ಟೇ ಅಲ್ಲದೆ ಅಕ್ಷರಶಃ ಅವರನ್ನು ಶೋಷಿಸಿ ಆ ಮೂಲಕ ತಮ್ಮ ಬೇಡಿಕೆ ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ಬಲವಂತಪಡಿಸಲು ಇದು ಪರವಾನಗಿ ನೀಡುವುದಿಲ್ಲ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.
“ಸಾಮಾನ್ಯ ಜನರಿಗೆ ಅಪಾಯ ಮತ್ತು ಅನಾನುಕೂಲತೆಯನ್ನು ಉಂಟುಮಾಡದ ಮಟ್ಟಿಗೆ ಪ್ರತಿಭಟನೆಗೆ ಔದಾರ್ಯ ತೊರಬಹುದಾದರೂ ಯಾವುದೇ ಸಾರ್ವಜನಿಕ ರಸ್ತೆ ನಿರ್ಬಂಧಿಸಲು ಸಂಘ ಸಂಸ್ಥೆಗಳು ದೊಡ್ಡಮಟ್ಟದಲ್ಲಿ ಸೇರಿದಾಗ ಅದಕ್ಕೆ ಅವಕಾಶ ನೀಡದಂತೆ ಆಡಳಿತ ವ್ಯವಸ್ಥೆ ತಕ್ಷಣದ ಕ್ರಮ ಕೈಗೊಳ್ಳಬೇಕು. ನಾವು ಗಮನಿಸಿದಂತೆ ಪ್ರಸ್ತುತ ಪ್ರಕರಣದಲ್ಲಿ ಅಧಿಕಾರಿಗಳು ಜನರಿಗೆ ಎದುರಿಸುತ್ತಿರುವ ಪರಿಸ್ಥಿತಿಗೆ ಕಾರಣವೇನು ಎಂಬುದನ್ನು ಗ್ರಹಿಸಲು ವಿಫಲರಾಗಿದ್ದಾರೆ “ ಎಂದು ನ್ಯಾಯಾಲಯ ಹೇಳಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.